<p><strong>ಕಲಬುರಗಿ</strong>: ಲೈಂಗಿಕ ದೌರ್ಜನ್ಯ ಎಸಗಿದ ಇಬ್ಬರು ಅಪರಾಧಿಗಳಿಗೆ ಪ್ರತ್ಯೇಕ ಪ್ರಕರಣಗಳಲ್ಲಿ ತಲಾ 20 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್(ವಿಶೇಷ ಪೋಕ್ಸೊ) ನ್ಯಾಯಾಲಯ ಶನಿವಾರ ಆದೇಶ ನೀಡಿದೆ.</p>.<p>ಮಹಾಗಾಂವ ಠಾಣೆ ವ್ಯಾಪ್ತಿ: ಈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 17 ವರ್ಷ 10 ತಿಂಗಳ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗ್ರಾಮವೊಂದರ ಸತೀಶ ಬಾಬುರಾವ ವಡ್ಡರ(21)ನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ₹1,60,500 ದಂಡ ವಿಧಿಸಲಾಗಿದೆ.</p>.<p>ಅಪರಾಧಿ 2024ರ ಮಾರ್ಚ್ 15ರಂದು ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಮೇ ತಿಂಗಳಲ್ಲಿ ಪುಣೆಗೆ ಕರೆದುಕೊಂಡು ಹೋಗಿ, ಅಲ್ಲಿಯೂ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತು ಮಹಾಗಾಂವ ಠಾಣೆ ತನಿಖಾಧಿಕಾರಿ ವಿ.ನಾರಾಯಣ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್(ವಿಶೇಷ ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶ ಮಹ್ಮದ್ ಮುಜೀರ್ ಉಲ್ಲಾ ಸಿ.ಜೆ. ಅವರು ಅಪರಾಧಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸಂತ್ರಸ್ತೆಗೆ ₹2.50 ಲಕ್ಷ ಪರಿಹಾರವಾಗಿ ಕಾನೂನು ಪ್ರಾಧಿಕಾರದಿಂದ ನೀಡಬೇಕು ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಸರ್ಕಾರದ ಪರವಾಗಿ ಶಾಂತವೀರ ಬಿ.ತುಪ್ಪದ ವಾದ ಮಂಡಿಸಿದ್ದರು. ಪೊಲೀಸ್ ಸಿಬ್ಬಂದಿ ಬಾದಶಾಹ, ಪ್ರಶಾಂತ, ಅಭಿಲಾಷಾ ಅವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.</p>.<p><strong>ಮುಧೋಳ ಠಾಣೆ ವ್ಯಾಪ್ತಿ:</strong> ಈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗ್ರಾಮವೊಂದರ ದೇವರಾಜ ತಿಮ್ಮಪ್ಪ ವಡ್ಡರ(20)ನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ₹1.50 ಲಕ್ಷ ದಂಡ ವಿಧಿಸಲಾಗಿದೆ.</p>.<p>2025ರ ಏಪ್ರಿಲ್ನಲ್ಲಿ ಅಪ್ರಾಪ್ತೆಯನ್ನು ಮನೆಯಿಂದ ಅಪಹರಣ ಮಾಡಿದ ಅಪರಾಧಿ, ಜಮೀನೊಂದರಲ್ಲಿ ಮತ್ತು ಹೈದರಾಬಾದ್ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತು ಮುಧೋಳ ಠಾಣೆಯ ತನಿಖಾಧಿಕಾರಿ ದೌಲತ್ ಎನ್.ಕೆ., ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶ ಮಹ್ಮದ್ ಮುಜೀರ್ ಉಲ್ಲಾ ಸಿ.ಜೆ. ಅವರು ಅಪರಾಧಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸಂತ್ರಸ್ತೆಗೆ ₹3 ಲಕ್ಷ ಪರಿಹಾರವಾಗಿ ಕಾನೂನು ಪ್ರಾಧಿಕಾರದಿಂದ ನೀಡಬೇಕು ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಸರ್ಕಾರದ ಪರವಾಗಿ ಶಾಂತವೀರ ಬಿ.ತುಪ್ಪದ ವಾದ ಮಂಡಿಸಿದ್ದರು. ಪೊಲೀಸ್ ಸಿಬ್ಬಂದಿ ಚಂದ್ರಕಾಂತ ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಲೈಂಗಿಕ ದೌರ್ಜನ್ಯ ಎಸಗಿದ ಇಬ್ಬರು ಅಪರಾಧಿಗಳಿಗೆ ಪ್ರತ್ಯೇಕ ಪ್ರಕರಣಗಳಲ್ಲಿ ತಲಾ 20 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್(ವಿಶೇಷ ಪೋಕ್ಸೊ) ನ್ಯಾಯಾಲಯ ಶನಿವಾರ ಆದೇಶ ನೀಡಿದೆ.</p>.<p>ಮಹಾಗಾಂವ ಠಾಣೆ ವ್ಯಾಪ್ತಿ: ಈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 17 ವರ್ಷ 10 ತಿಂಗಳ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗ್ರಾಮವೊಂದರ ಸತೀಶ ಬಾಬುರಾವ ವಡ್ಡರ(21)ನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ₹1,60,500 ದಂಡ ವಿಧಿಸಲಾಗಿದೆ.</p>.<p>ಅಪರಾಧಿ 2024ರ ಮಾರ್ಚ್ 15ರಂದು ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಮೇ ತಿಂಗಳಲ್ಲಿ ಪುಣೆಗೆ ಕರೆದುಕೊಂಡು ಹೋಗಿ, ಅಲ್ಲಿಯೂ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತು ಮಹಾಗಾಂವ ಠಾಣೆ ತನಿಖಾಧಿಕಾರಿ ವಿ.ನಾರಾಯಣ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್(ವಿಶೇಷ ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶ ಮಹ್ಮದ್ ಮುಜೀರ್ ಉಲ್ಲಾ ಸಿ.ಜೆ. ಅವರು ಅಪರಾಧಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸಂತ್ರಸ್ತೆಗೆ ₹2.50 ಲಕ್ಷ ಪರಿಹಾರವಾಗಿ ಕಾನೂನು ಪ್ರಾಧಿಕಾರದಿಂದ ನೀಡಬೇಕು ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಸರ್ಕಾರದ ಪರವಾಗಿ ಶಾಂತವೀರ ಬಿ.ತುಪ್ಪದ ವಾದ ಮಂಡಿಸಿದ್ದರು. ಪೊಲೀಸ್ ಸಿಬ್ಬಂದಿ ಬಾದಶಾಹ, ಪ್ರಶಾಂತ, ಅಭಿಲಾಷಾ ಅವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.</p>.<p><strong>ಮುಧೋಳ ಠಾಣೆ ವ್ಯಾಪ್ತಿ:</strong> ಈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗ್ರಾಮವೊಂದರ ದೇವರಾಜ ತಿಮ್ಮಪ್ಪ ವಡ್ಡರ(20)ನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ₹1.50 ಲಕ್ಷ ದಂಡ ವಿಧಿಸಲಾಗಿದೆ.</p>.<p>2025ರ ಏಪ್ರಿಲ್ನಲ್ಲಿ ಅಪ್ರಾಪ್ತೆಯನ್ನು ಮನೆಯಿಂದ ಅಪಹರಣ ಮಾಡಿದ ಅಪರಾಧಿ, ಜಮೀನೊಂದರಲ್ಲಿ ಮತ್ತು ಹೈದರಾಬಾದ್ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತು ಮುಧೋಳ ಠಾಣೆಯ ತನಿಖಾಧಿಕಾರಿ ದೌಲತ್ ಎನ್.ಕೆ., ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶ ಮಹ್ಮದ್ ಮುಜೀರ್ ಉಲ್ಲಾ ಸಿ.ಜೆ. ಅವರು ಅಪರಾಧಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸಂತ್ರಸ್ತೆಗೆ ₹3 ಲಕ್ಷ ಪರಿಹಾರವಾಗಿ ಕಾನೂನು ಪ್ರಾಧಿಕಾರದಿಂದ ನೀಡಬೇಕು ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಸರ್ಕಾರದ ಪರವಾಗಿ ಶಾಂತವೀರ ಬಿ.ತುಪ್ಪದ ವಾದ ಮಂಡಿಸಿದ್ದರು. ಪೊಲೀಸ್ ಸಿಬ್ಬಂದಿ ಚಂದ್ರಕಾಂತ ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>