<p><strong>ಕಲಬುರಗಿ:</strong> ನಗರದ ಖಾಸಗಿ ಶಾಲೆಯೊಂದರಲ್ಲಿ ಐವರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಮೈ–ಕೈ ಮುಟ್ಟಿ ಕಿರುಕುಳ ನೀಡಿದ ಆರೋಪದಡಿ ಶಾಲಾ ಸಿಬ್ಬಂದಿಯ ಸಂಬಂಧಿ ವಿರುದ್ಧ ಇತ್ತೀಚೆಗೆ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಐವರು ಬಾಲಕಿಯರೊಂದಿಗೆ ದಾವೂದ್ (60) ಎಂಬಾತ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ’ ಎಂದು ಆರೋಪಿಸಿ ಬಾಲಕಿಯರ ಪೋಷಕರು ದೂರು ನೀಡಿದ್ದರು. ಆ ದೂರಿನನ್ವಯ ವಿಶ್ವವಿದ್ಯಾಲಯ ಠಾಣೆ ಪೊಲೀಸರು ದಾವೂದ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.</p>.<h2>ಚಿನ್ನಾಭರಣ ಕಳವು</h2>.<p>ಕಲಬುರಗಿ: ನಗರದ ಕಾಂತಾ ಕಾಲೊನಿಯ ಬುದ್ಧ ವಿಹಾರ ಎದುರಿನ ಪ್ರದೇಶದ ಮನೆಯೊಂದರ ಬೀಗ ಮುರಿದ ಕಳ್ಳರು ₹2.65 ಲಕ್ಷ ಮೌಲ್ಯದ ಸ್ವತ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.</p>.<p>‘45 ಗ್ರಾಂ ಚಿನ್ನಾಭರಣ, 100 ಗ್ರಾಂ ಬೆಳ್ಳಿ ಆಭರಣ ಹಾಗೂ ₹5 ಸಾವಿರ ನಗದು ಕಳುವಾಗಿದೆ’ ಎಂದು ಚಿನ್ನ–ಬೆಳ್ಳಿ ಆಭರಣಗಳನ್ನು ಕಳೆದುಕೊಂಡ ಶಿಕ್ಷಕ ತೂಗುದೀಪ ಸೂರನ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಈ ಕುರಿತು ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<h2>ಸರ ಕಿತ್ತು ಪರಾರಿ</h2>.<p>ಕಲಬುರಗಿ: ಬೈಕ್ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ.</p>.<p>ರಾಮಮಂದಿರ ವೃತ್ತದಿಂದ ನಾಗನಹಳ್ಳಿ ಕ್ರಾಸ್ ನಡುವಣ ರಿಂಗ್ ರಸ್ತೆಯ ಸರ್ವೀಸ್ ರಸ್ತೆಯಲ್ಲಿ ಈದ್ಗಾ ಮೈದಾನದ ಸಮೀಪ ಈ ಕೃತ್ಯ ನಡೆದಿದೆ.</p>.<p>ಎಸ್ಬಿಐ ಬ್ಯಾಂಕ್ನ ಉದ್ಯೋಗಿ ಪ್ರೀತಿ ಸುತಾರ ಚಿನ್ನಾಭರಣ ಕಳೆದುಕೊಂಡವರು. </p>.<p>‘10 ಗ್ರಾಂ ಚಿನ್ನದ ಸರ ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ’ ಎಂದು ಪ್ರೀತಿ ಸುತಾರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಈ ಕುರಿತು ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನಗರದ ಖಾಸಗಿ ಶಾಲೆಯೊಂದರಲ್ಲಿ ಐವರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಮೈ–ಕೈ ಮುಟ್ಟಿ ಕಿರುಕುಳ ನೀಡಿದ ಆರೋಪದಡಿ ಶಾಲಾ ಸಿಬ್ಬಂದಿಯ ಸಂಬಂಧಿ ವಿರುದ್ಧ ಇತ್ತೀಚೆಗೆ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಐವರು ಬಾಲಕಿಯರೊಂದಿಗೆ ದಾವೂದ್ (60) ಎಂಬಾತ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ’ ಎಂದು ಆರೋಪಿಸಿ ಬಾಲಕಿಯರ ಪೋಷಕರು ದೂರು ನೀಡಿದ್ದರು. ಆ ದೂರಿನನ್ವಯ ವಿಶ್ವವಿದ್ಯಾಲಯ ಠಾಣೆ ಪೊಲೀಸರು ದಾವೂದ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.</p>.<h2>ಚಿನ್ನಾಭರಣ ಕಳವು</h2>.<p>ಕಲಬುರಗಿ: ನಗರದ ಕಾಂತಾ ಕಾಲೊನಿಯ ಬುದ್ಧ ವಿಹಾರ ಎದುರಿನ ಪ್ರದೇಶದ ಮನೆಯೊಂದರ ಬೀಗ ಮುರಿದ ಕಳ್ಳರು ₹2.65 ಲಕ್ಷ ಮೌಲ್ಯದ ಸ್ವತ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.</p>.<p>‘45 ಗ್ರಾಂ ಚಿನ್ನಾಭರಣ, 100 ಗ್ರಾಂ ಬೆಳ್ಳಿ ಆಭರಣ ಹಾಗೂ ₹5 ಸಾವಿರ ನಗದು ಕಳುವಾಗಿದೆ’ ಎಂದು ಚಿನ್ನ–ಬೆಳ್ಳಿ ಆಭರಣಗಳನ್ನು ಕಳೆದುಕೊಂಡ ಶಿಕ್ಷಕ ತೂಗುದೀಪ ಸೂರನ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಈ ಕುರಿತು ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<h2>ಸರ ಕಿತ್ತು ಪರಾರಿ</h2>.<p>ಕಲಬುರಗಿ: ಬೈಕ್ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ.</p>.<p>ರಾಮಮಂದಿರ ವೃತ್ತದಿಂದ ನಾಗನಹಳ್ಳಿ ಕ್ರಾಸ್ ನಡುವಣ ರಿಂಗ್ ರಸ್ತೆಯ ಸರ್ವೀಸ್ ರಸ್ತೆಯಲ್ಲಿ ಈದ್ಗಾ ಮೈದಾನದ ಸಮೀಪ ಈ ಕೃತ್ಯ ನಡೆದಿದೆ.</p>.<p>ಎಸ್ಬಿಐ ಬ್ಯಾಂಕ್ನ ಉದ್ಯೋಗಿ ಪ್ರೀತಿ ಸುತಾರ ಚಿನ್ನಾಭರಣ ಕಳೆದುಕೊಂಡವರು. </p>.<p>‘10 ಗ್ರಾಂ ಚಿನ್ನದ ಸರ ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ’ ಎಂದು ಪ್ರೀತಿ ಸುತಾರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಈ ಕುರಿತು ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>