ಕಮಿಷನರೇಟ್ನ ಮೊದಲ ಪೂರ್ಣ ಪ್ರಮಾಣದ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ‘ಬಡಾವಣೆಯ ಪ್ರತಿಯೊಂದು ಮನೆಗೂ ನಮ್ಮ ಪೊಲೀಸರು ಭೇಟಿ ನೀಡಲಿದ್ದಾರೆ. ಏನಾದರೂ ಅನಾಹುತಗಳು, ಕಳ್ಳತನದಂತಹ ಪ್ರಕರಣಗಳು ನಡೆದ ಸಂದರ್ಭದಲ್ಲಿ ಯಾರನ್ನು ಸಂಪರ್ಕಿಸಬೇಕು ಎಂಬ ಬಗ್ಗೆ ಮಾಹಿತಿಯುಳ್ಳ ಕರಪತ್ರಗಳನ್ನು ಮನೆ ಮನೆಗೆ ತಲುಪಿಸಲಿದ್ದಾರೆ. ಮನೆಯ ಮುಖ್ಯಸ್ಥರ ಮೊಬೈಲ್ ಸಂಖ್ಯೆಯನ್ನು ಪಡೆಯಲಿದ್ದು, ಆ ವ್ಯಾಪ್ತಿಯ ಪೊಲೀಸ್ ಠಾಣೆ ಹಾಗೂ ತಮ್ಮ ಮೊಬೈಲ್ ಸಂಖ್ಯೆಗಳನ್ನು ಪೊಲೀಸರು ಹಂಚಿಕೊಳ್ಳಲಿದ್ದಾರೆ. ಇದರಿಂದಾಗಿ ತುರ್ತು ಸಂದರ್ಭಗಳಲ್ಲಿ ಸಂಪರ್ಕಿಸಲು ಸಹಕಾರಿಯಾಗಲಿದೆ’ ಎಂದರು.