<p><strong>ಕಲಬುರ್ಗಿ:</strong> ಪೊಲೀಸ್ ಕಾನ್ಸ್ಟೆಬಲ್ವೊಬ್ಬರು, ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ವೃದ್ಧೆಯ ಪ್ರಾಣ ರಕ್ಷಣೆ ಮಾಡಿರುವ ಘಟನೆ ಜೇವರ್ಗಿ ತಾಲ್ಲೂಕಿನ ಕಟ್ಟಿಸಂಗಾವಿಯ ಸೇತುವೆ ಬಳಿ ಇತ್ತೀಚೆಗೆ ನಡೆದಿದ್ದು, ಅದರ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.</p>.<p>ಜೇವರ್ಗಿ ಠಾಣೆಯ ಕಾನ್ಸ್ಟೆಬಲ್ ಅನಿಲಕುಮಾರ್ ಎಂಬುವವರು ಸಮಯಪ್ರಜ್ಞೆ ಮೆರೆದು ಜಾಣ್ಮೆಯಿಂದ ಅಜ್ಜಿಯ ಮನವೊಲಿಸಿ ಆಕೆಯ ಪ್ರಾಣ ರಕ್ಷಣೆ ಮಾಡಿದ್ದಾರೆ. ಆಳಂದ ನಿವಾಸಿ ಗುರುಬಾಯಿ ಮಾಲಗಾರ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದರು ಎನ್ನಲಾಗಿದೆ.</p>.<p>ಗುರುವಾರ ಹೊಸ ವರ್ಷ ದಿನದ ರಾತ್ರಿ ಗುರುಬಾಯಿ ಹೊಟ್ಟೆ ನೋವಿನ ಕಾರಣಕ್ಕೆ ಭೀಮಾನದಿಗೆ ಕಟ್ಟಿಸಂಗಾವಿ ಬಳಿ ನಿರ್ಮಿಸಿರುವ ಸೇತುವೆ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವಾಗ, ಅದೇ ರಸ್ತೆಯಲ್ಲಿ ರಾತ್ರಿ ಗಸ್ತಿಗೆ ತೆರಳುತ್ತಿದ್ದ ಅನಿಲಕುಮಾರ್ ಗಮನಿಸಿದ್ದಾರೆ.</p>.<p>ತಕ್ಷಣ ಸಮಯ ಪ್ರಜ್ಞೆ ತೋರಿದ ಅನಿಲಕುಮಾರ್, ಅಜ್ಜಿಯನ್ನು ಮಾತಿಗೆಳೆದು ಜಾಣ್ಮೆಯಿಂದ ಆಕೆಯ ಬಳಿ ಹೋಗಿದ್ದಾರೆ. ತಮ್ಮ ಸಹೋದ್ಯೋಗಿ ವಿಜಯ ಕುಮಾರ್ ಹಾಗೂ ಸ್ಥಳೀಯರ ಸಹಾಯದಿಂದ ಅಜ್ಜಿಯನ್ನು ರಕ್ಷಣೆ ಮಾಡಿದ್ದಾರೆ. ನಂತರ ಪೆಟ್ರೋಲಿಂಗ್ ವಾಹನದ ಮೂಲಕ ವೃದ್ಧೆಯನ್ನು ಜೇವರ್ಗಿಗೆ ಕರೆದೊಯ್ದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಪೊಲೀಸ್ ಕಾನ್ಸ್ಟೆಬಲ್ವೊಬ್ಬರು, ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ವೃದ್ಧೆಯ ಪ್ರಾಣ ರಕ್ಷಣೆ ಮಾಡಿರುವ ಘಟನೆ ಜೇವರ್ಗಿ ತಾಲ್ಲೂಕಿನ ಕಟ್ಟಿಸಂಗಾವಿಯ ಸೇತುವೆ ಬಳಿ ಇತ್ತೀಚೆಗೆ ನಡೆದಿದ್ದು, ಅದರ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.</p>.<p>ಜೇವರ್ಗಿ ಠಾಣೆಯ ಕಾನ್ಸ್ಟೆಬಲ್ ಅನಿಲಕುಮಾರ್ ಎಂಬುವವರು ಸಮಯಪ್ರಜ್ಞೆ ಮೆರೆದು ಜಾಣ್ಮೆಯಿಂದ ಅಜ್ಜಿಯ ಮನವೊಲಿಸಿ ಆಕೆಯ ಪ್ರಾಣ ರಕ್ಷಣೆ ಮಾಡಿದ್ದಾರೆ. ಆಳಂದ ನಿವಾಸಿ ಗುರುಬಾಯಿ ಮಾಲಗಾರ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದರು ಎನ್ನಲಾಗಿದೆ.</p>.<p>ಗುರುವಾರ ಹೊಸ ವರ್ಷ ದಿನದ ರಾತ್ರಿ ಗುರುಬಾಯಿ ಹೊಟ್ಟೆ ನೋವಿನ ಕಾರಣಕ್ಕೆ ಭೀಮಾನದಿಗೆ ಕಟ್ಟಿಸಂಗಾವಿ ಬಳಿ ನಿರ್ಮಿಸಿರುವ ಸೇತುವೆ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವಾಗ, ಅದೇ ರಸ್ತೆಯಲ್ಲಿ ರಾತ್ರಿ ಗಸ್ತಿಗೆ ತೆರಳುತ್ತಿದ್ದ ಅನಿಲಕುಮಾರ್ ಗಮನಿಸಿದ್ದಾರೆ.</p>.<p>ತಕ್ಷಣ ಸಮಯ ಪ್ರಜ್ಞೆ ತೋರಿದ ಅನಿಲಕುಮಾರ್, ಅಜ್ಜಿಯನ್ನು ಮಾತಿಗೆಳೆದು ಜಾಣ್ಮೆಯಿಂದ ಆಕೆಯ ಬಳಿ ಹೋಗಿದ್ದಾರೆ. ತಮ್ಮ ಸಹೋದ್ಯೋಗಿ ವಿಜಯ ಕುಮಾರ್ ಹಾಗೂ ಸ್ಥಳೀಯರ ಸಹಾಯದಿಂದ ಅಜ್ಜಿಯನ್ನು ರಕ್ಷಣೆ ಮಾಡಿದ್ದಾರೆ. ನಂತರ ಪೆಟ್ರೋಲಿಂಗ್ ವಾಹನದ ಮೂಲಕ ವೃದ್ಧೆಯನ್ನು ಜೇವರ್ಗಿಗೆ ಕರೆದೊಯ್ದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>