<p><strong>ಕಲಬುರ್ಗಿ:</strong> ‘ಮಾರ್ಚ್ 3ರಂದು ನಮ್ಮ ಮನೆಯಲ್ಲಿಟ್ಟಿದ್ದ ₹ 20 ಲಕ್ಷ ನಗದು, 25 ತೊಲ ಚಿನ್ನವನ್ನು ದರೋಡೆಕೋರರು ಕಳ್ಳತನ ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ದೂರು ನೀಡಲು ಹೋದರೆ ವಿಶ್ವವಿದ್ಯಾಲಯ ಠಾಣೆ ಪೊಲೀಸರು ದೂರು ಸ್ವೀಕರಿಸುತ್ತಿಲ್ಲ’ ಎಂದು ಎಸ್.ಎಸ್. ಟಿ.ವಿ. ಮಾಲೀಕ, ಹಿರಿಯ ಪತ್ರಕರ್ತ ಶಂಕರ ಕೋಡ್ಲಾ ಬೇಸರ ವ್ಯಕ್ತಪಡಿಸಿದರು.</p>.<p>‘ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಮಯ ಸಾಧಿಸಿದ ಕಳ್ಳರು ಬೀರುವಿನಲ್ಲಿಟ್ಟಿದ್ದ ನಗದು ಹಾಗೂ ಚಿನ್ನವನ್ನು ಕದ್ದುಕೊಂಡು ಪರಾರಿಯಾಗಿದ್ದಾರೆ. ಅದೇ ದಿನ ದೂರು ನೀಡಲೆಂದು ಠಾಣೆಗೆ ತೆರಳಿ ಸಂಜೆಯವರೆಗೆ ಕಾಯ್ದರೂ ದೂರು ಸ್ವೀಕರಿಸಿಲ್ಲ. ಈ ಬಗ್ಗೆ ಪೊಲೀಸ್ ಕಮಿಷನರ್ ಅವರ ಗಮನಕ್ಕೆ ತಂದರೆ ಅವರೂ ಸೂಕ್ತವಾಗಿ ಸ್ಪಂದಿಸಿಲ್ಲ’ ಎಂದರು.</p>.<p>‘ಕರ್ನಾಟಕ ರಾಜ್ಯ ಹಣಕಾಸು ನಿಗಮದಿಂದ ₹ 1.5 ಕೋಟಿ ಹಾಗೂ ಬ್ಯಾಂಕ್ನಿಂದ ₹ 1 ಕೋಟಿ ಸಾಲ ಮಾಡಿದ್ದೆ. ಇದೇ 10ರಂದು ಸಾಲದ ಕಂತನ್ನು ಪಾವತಿಸಬೇಕಿತ್ತು. ಅದಕ್ಕಾಗಿ ಹಣವನ್ನು ಮನೆಯಲ್ಲಿಟ್ಟಿದ್ದೆವು. ನನ್ನ ಮಗಳು ಬೀರುವಿನ ಕೀಲಿಯನ್ನು ಅಲ್ಲಿಯೇ ಬಿಟ್ಟು ಹೊರ ಹೋಗಿದ್ದಾಗ ಈ ಘಟನೆ ನಡೆದಿದೆ. ಹಿಂದೆಯೂ ಕುಸನೂರ ರಸ್ತೆಯಲ್ಲಿ ಹಲವು ಕಳ್ಳತನ ಪ್ರಕರಣಗಳು ನಡೆದಿದ್ದು, ಆಗಲೂ ಪೊಲೀಸರು ದೂರು ಸ್ವೀಕರಿಸಿಲ್ಲ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ‘ಮಾರ್ಚ್ 3ರಂದು ನಮ್ಮ ಮನೆಯಲ್ಲಿಟ್ಟಿದ್ದ ₹ 20 ಲಕ್ಷ ನಗದು, 25 ತೊಲ ಚಿನ್ನವನ್ನು ದರೋಡೆಕೋರರು ಕಳ್ಳತನ ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ದೂರು ನೀಡಲು ಹೋದರೆ ವಿಶ್ವವಿದ್ಯಾಲಯ ಠಾಣೆ ಪೊಲೀಸರು ದೂರು ಸ್ವೀಕರಿಸುತ್ತಿಲ್ಲ’ ಎಂದು ಎಸ್.ಎಸ್. ಟಿ.ವಿ. ಮಾಲೀಕ, ಹಿರಿಯ ಪತ್ರಕರ್ತ ಶಂಕರ ಕೋಡ್ಲಾ ಬೇಸರ ವ್ಯಕ್ತಪಡಿಸಿದರು.</p>.<p>‘ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಮಯ ಸಾಧಿಸಿದ ಕಳ್ಳರು ಬೀರುವಿನಲ್ಲಿಟ್ಟಿದ್ದ ನಗದು ಹಾಗೂ ಚಿನ್ನವನ್ನು ಕದ್ದುಕೊಂಡು ಪರಾರಿಯಾಗಿದ್ದಾರೆ. ಅದೇ ದಿನ ದೂರು ನೀಡಲೆಂದು ಠಾಣೆಗೆ ತೆರಳಿ ಸಂಜೆಯವರೆಗೆ ಕಾಯ್ದರೂ ದೂರು ಸ್ವೀಕರಿಸಿಲ್ಲ. ಈ ಬಗ್ಗೆ ಪೊಲೀಸ್ ಕಮಿಷನರ್ ಅವರ ಗಮನಕ್ಕೆ ತಂದರೆ ಅವರೂ ಸೂಕ್ತವಾಗಿ ಸ್ಪಂದಿಸಿಲ್ಲ’ ಎಂದರು.</p>.<p>‘ಕರ್ನಾಟಕ ರಾಜ್ಯ ಹಣಕಾಸು ನಿಗಮದಿಂದ ₹ 1.5 ಕೋಟಿ ಹಾಗೂ ಬ್ಯಾಂಕ್ನಿಂದ ₹ 1 ಕೋಟಿ ಸಾಲ ಮಾಡಿದ್ದೆ. ಇದೇ 10ರಂದು ಸಾಲದ ಕಂತನ್ನು ಪಾವತಿಸಬೇಕಿತ್ತು. ಅದಕ್ಕಾಗಿ ಹಣವನ್ನು ಮನೆಯಲ್ಲಿಟ್ಟಿದ್ದೆವು. ನನ್ನ ಮಗಳು ಬೀರುವಿನ ಕೀಲಿಯನ್ನು ಅಲ್ಲಿಯೇ ಬಿಟ್ಟು ಹೊರ ಹೋಗಿದ್ದಾಗ ಈ ಘಟನೆ ನಡೆದಿದೆ. ಹಿಂದೆಯೂ ಕುಸನೂರ ರಸ್ತೆಯಲ್ಲಿ ಹಲವು ಕಳ್ಳತನ ಪ್ರಕರಣಗಳು ನಡೆದಿದ್ದು, ಆಗಲೂ ಪೊಲೀಸರು ದೂರು ಸ್ವೀಕರಿಸಿಲ್ಲ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>