<p><strong>ಕಲಬುರಗಿ</strong>: ‘ಪೊಲೀಸ್ ಅಧಿಕಾರಿಗಳು ಕೇವಲ ವೃತ್ತಿಯಿಂದ ನಿವೃತ್ತರಾಗುತ್ತಾರೆಯೇ ವಿನಹಃ, ಜವಾಬ್ದಾರಿಯಿಂದಲ್ಲ. ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಅವರ ಮಾರ್ಗದರ್ಶನ ಅಗತ್ಯ’ ಎಂದು ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಹೇಳಿದರು.</p>.<p>ನಗರದ ನಿವೃತ್ತ ಪೊಲೀಸ್ ಅಧಿಕಾರಿಗಳ ಭವನದ ಸಭಾಂಗಣದಲ್ಲಿ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಬುಧವಾರ ಆಯೋಜಿಸಿದ್ದ ಸಂಘದ 11ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.</p>.<p>‘ಪೊಲೀಸ್ ಸೇವೆ ದೇಶ ಸೇವೆಗೆ ಸಮಾನವಾದುದ್ದಾಗಿದೆ. ಈ ಸೇವೆಯಲ್ಲಿ ತ್ಯಾಗಕ್ಕೂ ತಯಾರಿರಬೇಕು. ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ತರುವವರನ್ನು ಮಟ್ಟಹಾಕುವ ಸಂದರ್ಭದಲ್ಲಿ ತ್ಯಾಗ ಮಾಡಬೇಕಾಗುತ್ತದೆ. ಪೊಲೀಸರು ತಮ್ಮ ಜೀವನದ ಅಮೂಲ್ಯ ಸಮಯ ವೃತ್ತಿಗೆ ಮೀಸಲಿಟ್ಟಿರುತ್ತಾರೆ. ಕಾರಣ ಜನರು ನೆಮ್ಮದಿಯಾಗಿದ್ದಾರೆ’ ಎಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಮಾತನಾಡಿ, ‘ಬಂದೋಬಸ್ತ್ ವೇಳೆ ನಿವೃತ್ತ ಅಧಿಕಾರಿಗಳ ಮಾರ್ಗದರ್ಶನ ಬೇಕಾಗುತ್ತದೆ. ಆರ್ಎಸ್ಎಸ್ ಪಥಸಂಚಲನ ಪ್ರಕರಣದ ಸಂದರ್ಭದಲ್ಲೂ ನಿವೃತ್ತ ಅಧಿಕಾರಿಗಳ ನೆರವು ಪಡೆಯಲಾಗಿತ್ತು. ನಿವೃತ್ತರಾದ ಬಳಿಕವೂ ಇಲಾಖೆ ಜೊತೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.</p>.<p>‘2014ರಲ್ಲಿ ಸ್ಥಾಪನೆಯಾದ ಈ ಸಂಘಕ್ಕೆ 11 ವರ್ಷಗಳಾಗಿವೆ. ಸಾಕಷ್ಟು ಅಭಿವೃದ್ಧಿ ಹೊಂದುತ್ತಿದೆ. ನಿವೃತ್ತರಾದ ಪೊಲೀಸ್ ಅಧಿಕಾರಿಗಳನ್ನು ಸಂಘಕ್ಕೆ ಸೇರಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವೀರಣ್ಣ ಜಿ.ಹೊನಶೆಟ್ಟಿ ಮಾತನಾಡಿ, ‘2014ರಲ್ಲಿ ಸಂಘ ಸ್ಥಾಪನೆಯಾಗಿದೆ. 1,050 ಸದಸ್ಯರಿದ್ದಾರೆ. ನಿವೃತ್ತರು, ಅಧಿಕಾರಿಗಳು, ಜನಪ್ರತಿನಿಧಿಗಳ ದೇಣಿಗೆ ಹಾಗೂ ಇಲಾಖೆಯ ಅನುದಾನದಲ್ಲಿ ಭವನ ನಿರ್ಮಿಸಲಾಗಿದೆ. ರಕ್ತದಾನ ಶಿಬಿರದಂಥ ಕಾರ್ಯಕ್ರಮಗಳನ್ನು ಮಾಡಲಾಗಿದೆ’ ಎಂದು ತಿಳಿಸಿದರು.</p>.<p>ಪಾಳಾ ಹಿರೇಮಠದ ಗುರುಮೂರ್ತಿ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಪಪ್ಪಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘಣ್ಣವರ ಹಾಗೂ ಸಂಘದ ಮಾಜಿ ಅಧ್ಯಕ್ಷ ಬಸವರಾಜ ಇಂಗಿನ ಹಾಜರಿದ್ದರು. </p>.<div><blockquote>ಸಂಘದ ಕಾರ್ಯಕ್ರಮಕ್ಕೆ ಬಂದಿದ್ದು ಸಂತಸ ತಂದಿದೆ. ಜಿಲ್ಲೆಯ ನಿವೃತ್ತ ಪೊಲೀಸ್ ಅಧಿಕಾರಿಗಳು ತಮ್ಮ ಆರೋಗ್ಯದ ಕಡೆ ಗಮನಹರಿಸಬೇಕು </blockquote><span class="attribution">ಬಿ.ಜಿ.ಪಾಟೀಲ ವಿಧಾನ ಪರಿಷತ್ ಸದಸ್ಯ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ಪೊಲೀಸ್ ಅಧಿಕಾರಿಗಳು ಕೇವಲ ವೃತ್ತಿಯಿಂದ ನಿವೃತ್ತರಾಗುತ್ತಾರೆಯೇ ವಿನಹಃ, ಜವಾಬ್ದಾರಿಯಿಂದಲ್ಲ. ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಅವರ ಮಾರ್ಗದರ್ಶನ ಅಗತ್ಯ’ ಎಂದು ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಹೇಳಿದರು.</p>.<p>ನಗರದ ನಿವೃತ್ತ ಪೊಲೀಸ್ ಅಧಿಕಾರಿಗಳ ಭವನದ ಸಭಾಂಗಣದಲ್ಲಿ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಬುಧವಾರ ಆಯೋಜಿಸಿದ್ದ ಸಂಘದ 11ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.</p>.<p>‘ಪೊಲೀಸ್ ಸೇವೆ ದೇಶ ಸೇವೆಗೆ ಸಮಾನವಾದುದ್ದಾಗಿದೆ. ಈ ಸೇವೆಯಲ್ಲಿ ತ್ಯಾಗಕ್ಕೂ ತಯಾರಿರಬೇಕು. ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ತರುವವರನ್ನು ಮಟ್ಟಹಾಕುವ ಸಂದರ್ಭದಲ್ಲಿ ತ್ಯಾಗ ಮಾಡಬೇಕಾಗುತ್ತದೆ. ಪೊಲೀಸರು ತಮ್ಮ ಜೀವನದ ಅಮೂಲ್ಯ ಸಮಯ ವೃತ್ತಿಗೆ ಮೀಸಲಿಟ್ಟಿರುತ್ತಾರೆ. ಕಾರಣ ಜನರು ನೆಮ್ಮದಿಯಾಗಿದ್ದಾರೆ’ ಎಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಮಾತನಾಡಿ, ‘ಬಂದೋಬಸ್ತ್ ವೇಳೆ ನಿವೃತ್ತ ಅಧಿಕಾರಿಗಳ ಮಾರ್ಗದರ್ಶನ ಬೇಕಾಗುತ್ತದೆ. ಆರ್ಎಸ್ಎಸ್ ಪಥಸಂಚಲನ ಪ್ರಕರಣದ ಸಂದರ್ಭದಲ್ಲೂ ನಿವೃತ್ತ ಅಧಿಕಾರಿಗಳ ನೆರವು ಪಡೆಯಲಾಗಿತ್ತು. ನಿವೃತ್ತರಾದ ಬಳಿಕವೂ ಇಲಾಖೆ ಜೊತೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.</p>.<p>‘2014ರಲ್ಲಿ ಸ್ಥಾಪನೆಯಾದ ಈ ಸಂಘಕ್ಕೆ 11 ವರ್ಷಗಳಾಗಿವೆ. ಸಾಕಷ್ಟು ಅಭಿವೃದ್ಧಿ ಹೊಂದುತ್ತಿದೆ. ನಿವೃತ್ತರಾದ ಪೊಲೀಸ್ ಅಧಿಕಾರಿಗಳನ್ನು ಸಂಘಕ್ಕೆ ಸೇರಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವೀರಣ್ಣ ಜಿ.ಹೊನಶೆಟ್ಟಿ ಮಾತನಾಡಿ, ‘2014ರಲ್ಲಿ ಸಂಘ ಸ್ಥಾಪನೆಯಾಗಿದೆ. 1,050 ಸದಸ್ಯರಿದ್ದಾರೆ. ನಿವೃತ್ತರು, ಅಧಿಕಾರಿಗಳು, ಜನಪ್ರತಿನಿಧಿಗಳ ದೇಣಿಗೆ ಹಾಗೂ ಇಲಾಖೆಯ ಅನುದಾನದಲ್ಲಿ ಭವನ ನಿರ್ಮಿಸಲಾಗಿದೆ. ರಕ್ತದಾನ ಶಿಬಿರದಂಥ ಕಾರ್ಯಕ್ರಮಗಳನ್ನು ಮಾಡಲಾಗಿದೆ’ ಎಂದು ತಿಳಿಸಿದರು.</p>.<p>ಪಾಳಾ ಹಿರೇಮಠದ ಗುರುಮೂರ್ತಿ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಪಪ್ಪಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘಣ್ಣವರ ಹಾಗೂ ಸಂಘದ ಮಾಜಿ ಅಧ್ಯಕ್ಷ ಬಸವರಾಜ ಇಂಗಿನ ಹಾಜರಿದ್ದರು. </p>.<div><blockquote>ಸಂಘದ ಕಾರ್ಯಕ್ರಮಕ್ಕೆ ಬಂದಿದ್ದು ಸಂತಸ ತಂದಿದೆ. ಜಿಲ್ಲೆಯ ನಿವೃತ್ತ ಪೊಲೀಸ್ ಅಧಿಕಾರಿಗಳು ತಮ್ಮ ಆರೋಗ್ಯದ ಕಡೆ ಗಮನಹರಿಸಬೇಕು </blockquote><span class="attribution">ಬಿ.ಜಿ.ಪಾಟೀಲ ವಿಧಾನ ಪರಿಷತ್ ಸದಸ್ಯ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>