ಜೈಲಿನಿಂದ ಬಿಡುಗಡೆಯಾಗಿದ್ದು ತನ್ನನ್ನ ಕಾಣಲು ಮನೆ ಕಚೇರಿಗೆ ಯಾರು ಬರಬೇಡಿ ಎಂದು ಆರ್ ಡಿಪಿ ಸಂದೇಶ ರವಾನಿಸಿ, ಫೇಸ್ಬುಕ್ ಖಾತೆ ಇತರೆ ಸಾಮಾಜಿಕ ಜಾಲ ತಾಣಗಳಲ್ಲಿ ಸಂದೇಶ ಹಾಕಿದ್ದರು. 'ನನ್ನ ಅಭಿಮಾನಿಗಳು, ಹಿತೈಷಿಗಳು ನನ್ನನ್ನು ಕಾಣಲು ಕಾತುರದಿಂದ ಕಾಯುತ್ತಿದ್ದಿರಿ. ನನ್ನನ್ನು ವಿಜೃಂಭಣೆಯಿಂದ ಸ್ವಾಗತಿಸಲು ಖರ್ಚು ವೆಚ್ಚ ಮಾಡಿಕೊಂಡಿದ್ದಿರಿ. ಆದರೆ, ವೈಯಕ್ತಿಕ ಕೆಲಸದಿಂದ ಕಲಬುರಗಿಯಿಂದ ಹೊರಗಡೆ ಹೋಗಿದ್ದೇನೆ. ಒಂದು ವಾರದಲ್ಲಿ ಅಫಜಲಪುರಕ್ಕೆ ಬಂದು ನಿಮ್ಮ ಸೇವೆಯಲ್ಲಿ ತೋಡಗಿಕೊಳ್ಳುವುದಾಗಿ' ಸಂದೇಶ ನೀಡಿದ್ದಾರೆ.