‘ಕೆಲ ದಿನಗಳ ಹಿಂದೆ ಅನ್ನಭಾಗ್ಯ ಯೋಜನೆಯ ಪಡಿತರವನ್ನು ಖರೀದಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದರ ಕುರಿತು ಮಾಹಿತಿ ಇತ್ತು. ಖಚಿತ ಮಾಹಿತಿ ಮೇರೆ ದಾಳಿ ನಡೆಸಲಾಗಿದೆ. ಉನ್ನತ ಅಧಿಕಾರಿಗಳಿಂದ ಅಂಗಡಿ ತೆರೆಯಲು ಅನುಮತಿ ಸಿಗುತ್ತದೆ. ನಂತರ ಅಂಗಡಿ ತೆರೆದು, ಪಡಿತರ ಧಾನ್ಯದ ಕುರಿತು ಪರಿಶೀಲನೆ ಮಾಡಲಾಗುತ್ತದೆ. ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ’ ಎಂದು ಆಹಾರ ಇಲಾಖೆಯ ನಿರೀಕ್ಷಕ ಹೀರಾಸಿಂಗ ಚವಾಣ್ ತಿಳಿಸಿದ್ದಾರೆ.