<p><strong>ಕಲಬುರಗಿ</strong>: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ(ಸಿಯುಕೆ)ದಲ್ಲಿ ತಮಿಳು ವಿದ್ಯಾರ್ಥಿಗಳು ಮಂಗಳವಾರ ಪೊಂಗಲ್ ಆಚರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಸುಗ್ಗಿಯ ಉತ್ಸವದ ಸಾಂಸ್ಕೃತಿಕ ಪರಂಪರೆ ಮತ್ತು ಮಹತ್ವವನ್ನು ಎತ್ತಿ ತೋರಿಸುವ ಈ ಸಂಭ್ರಮ ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆಯಿತು.</p>.<p>ಸಾಂಪ್ರದಾಯಿಕ ಪೂಜೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ವೈವಿಧ್ಯಮಯ ರಂಗೋಲಿ ಹಾಕಲಾಗಿತ್ತು. ಎಲ್ಲ ತಮಿಳು ವಿದ್ಯಾರ್ಥಿಗಳು ಹಬ್ಬವನ್ನು ಸಂಕೇತಿಸುವ ರೋಮಾಂಚಕ ಕುಮಿ ನೃತ್ಯ ಪ್ರದರ್ಶಿಸಿದರು. ಸಿಲಂಬಮ್, ಶಾಸ್ತ್ರೀಯ ನೃತ್ಯ ಪ್ರದರ್ಶನಗಳು ನಡೆದವು.</p>.<p>ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಪೊಂಗಲ್ ಭಾರತದಾದ್ಯಂತ ಸುಗ್ಗಿಯ ಹಬ್ಬಗಳ ಮಹತ್ವವನ್ನು ಒತ್ತಿಹೇಳುತ್ತದೆ. ಇದು ರಾಷ್ಟ್ರದ ಆರ್ಥಿಕತೆ ಮತ್ತು ಸಾಂಸ್ಕೃತಿಕ ಸಂಪ್ರದಾಯಗಳ ಬೆನ್ನೆಲುಬಾಗಿ ಕೃಷಿಯ ಪಾತ್ರವನ್ನು ಎತ್ತಿ ತೋರಿಸುತ್ತದೆ. ಈ ದಿನವು ಉತ್ತರಾಯಣ ಅಂದರೆ ಸೂರ್ಯನ ಉತ್ತರಾಭಿಮುಖ ಪ್ರಯಾಣದ ಆರಂಭವನ್ನು ಸೂಚಿಸುತ್ತದೆ’ ಎಂದು ಹೇಳಿದರು.</p>.<p>ವಿದ್ಯಾರ್ಥಿ ಸಂಯೋಜಕರಾದ ಮೆರಿಕ್ ಮತ್ತು ಜೆರ್ಲಿನ್ ಪೊಂಗಲ್ ಮಹತ್ವದ ಕುರಿತು ವಿವರಿಸಿದರು.</p>.<p>ವಿತ್ತಾಧಿಕಾರಿ ರಾಮಾದೊರೈ, ಪ್ರೊ. ವೆಂಕಟರಮಣ ದೊಡ್ಡಿ, ನಲ್ಲ ಬಾಬು ಹಾಗೂ ಇತರ ಪ್ರಾಧ್ಯಾಪಕರು ಹಾಜರಿದ್ದರು. ಜಯವೇಲ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ(ಸಿಯುಕೆ)ದಲ್ಲಿ ತಮಿಳು ವಿದ್ಯಾರ್ಥಿಗಳು ಮಂಗಳವಾರ ಪೊಂಗಲ್ ಆಚರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಸುಗ್ಗಿಯ ಉತ್ಸವದ ಸಾಂಸ್ಕೃತಿಕ ಪರಂಪರೆ ಮತ್ತು ಮಹತ್ವವನ್ನು ಎತ್ತಿ ತೋರಿಸುವ ಈ ಸಂಭ್ರಮ ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆಯಿತು.</p>.<p>ಸಾಂಪ್ರದಾಯಿಕ ಪೂಜೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ವೈವಿಧ್ಯಮಯ ರಂಗೋಲಿ ಹಾಕಲಾಗಿತ್ತು. ಎಲ್ಲ ತಮಿಳು ವಿದ್ಯಾರ್ಥಿಗಳು ಹಬ್ಬವನ್ನು ಸಂಕೇತಿಸುವ ರೋಮಾಂಚಕ ಕುಮಿ ನೃತ್ಯ ಪ್ರದರ್ಶಿಸಿದರು. ಸಿಲಂಬಮ್, ಶಾಸ್ತ್ರೀಯ ನೃತ್ಯ ಪ್ರದರ್ಶನಗಳು ನಡೆದವು.</p>.<p>ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಪೊಂಗಲ್ ಭಾರತದಾದ್ಯಂತ ಸುಗ್ಗಿಯ ಹಬ್ಬಗಳ ಮಹತ್ವವನ್ನು ಒತ್ತಿಹೇಳುತ್ತದೆ. ಇದು ರಾಷ್ಟ್ರದ ಆರ್ಥಿಕತೆ ಮತ್ತು ಸಾಂಸ್ಕೃತಿಕ ಸಂಪ್ರದಾಯಗಳ ಬೆನ್ನೆಲುಬಾಗಿ ಕೃಷಿಯ ಪಾತ್ರವನ್ನು ಎತ್ತಿ ತೋರಿಸುತ್ತದೆ. ಈ ದಿನವು ಉತ್ತರಾಯಣ ಅಂದರೆ ಸೂರ್ಯನ ಉತ್ತರಾಭಿಮುಖ ಪ್ರಯಾಣದ ಆರಂಭವನ್ನು ಸೂಚಿಸುತ್ತದೆ’ ಎಂದು ಹೇಳಿದರು.</p>.<p>ವಿದ್ಯಾರ್ಥಿ ಸಂಯೋಜಕರಾದ ಮೆರಿಕ್ ಮತ್ತು ಜೆರ್ಲಿನ್ ಪೊಂಗಲ್ ಮಹತ್ವದ ಕುರಿತು ವಿವರಿಸಿದರು.</p>.<p>ವಿತ್ತಾಧಿಕಾರಿ ರಾಮಾದೊರೈ, ಪ್ರೊ. ವೆಂಕಟರಮಣ ದೊಡ್ಡಿ, ನಲ್ಲ ಬಾಬು ಹಾಗೂ ಇತರ ಪ್ರಾಧ್ಯಾಪಕರು ಹಾಜರಿದ್ದರು. ಜಯವೇಲ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>