<p><strong>ತುರ್ವಿಹಾಳ:</strong> ‘ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಬಿಸಿಯೂಟ ವಿತರಿಸಲಾಗಿದೆ’ ಎಂದು ಆರೋಪಿಸಿ ಹತ್ತಿಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಹಾಗೂ ಅಡುಗೆ ಸಹಾಯಕರನ್ನು ಗ್ರಾಮಸ್ಥರು ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>ಈ ಶಾಲೆಯಲ್ಲಿ 1ರಿಂದ 8ನೇ ತರಗತಿವರೆಗೆ ಒಟ್ಟು 96 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ‘ಮಧ್ಯಾಹ್ನ ತಯಾರಿಸಿದ ಬಿಸಿಯೂಟದ ಅನ್ನದಲ್ಲಿ ಶುಚಿತ್ವದ ಕೊರತೆ ಹಾಗೂ ತೀರಾ ಕಳಪೆ ಆಹಾರ ವಿತರಿಸಲಾಗಿದೆ’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿರುವ ಬಿಸಿಯೂಟವನ್ನು ಮುಖ್ಯಶಿಕ್ಷರು ಪರಿಶೀಲನೆ ನಡೆಸಬೇಕು. ನಿತ್ಯ ಶುಚಿತ್ವದಿಂದ ಆಹಾರ ತಯಾರಿಸಬೇಕು. ಅಡುಗೆ ಸಹಾಯಕರ ಮೇಲೆ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.</p>.<p>ಈವೇಳೆ ಎಸ್ಡಿಎಂಸಿ ಅಧ್ಯಕ್ಷ ನಾಗರಾಜ ಬೇವಿನಗಿಡ, ಗ್ರಾಮಸ್ಥರಾದ ಶಿವಲಿಂಗ ಭಂಡಾರಿ, ಸಣ್ಣ ವೆಂಕೋಬ, ಮರಿಯಪ್ಪ, ಬಸವರಾಜ, ಮಲ್ಲಪ್ಪ, ಬಸವರಾಜ, ಅಮರೇಶ, ಬಸವಂತಪ್ಪ, ಹನುಮಂತ, ಮುರ್ತೆಪ್ಪ, ತಿಮ್ಮಣ್ಣ, ಜಮದಗ್ನಿ, ತಿಮ್ಮಮ್ಮ, ಹನುಮಮ್ಮ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರ್ವಿಹಾಳ:</strong> ‘ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಬಿಸಿಯೂಟ ವಿತರಿಸಲಾಗಿದೆ’ ಎಂದು ಆರೋಪಿಸಿ ಹತ್ತಿಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಹಾಗೂ ಅಡುಗೆ ಸಹಾಯಕರನ್ನು ಗ್ರಾಮಸ್ಥರು ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>ಈ ಶಾಲೆಯಲ್ಲಿ 1ರಿಂದ 8ನೇ ತರಗತಿವರೆಗೆ ಒಟ್ಟು 96 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ‘ಮಧ್ಯಾಹ್ನ ತಯಾರಿಸಿದ ಬಿಸಿಯೂಟದ ಅನ್ನದಲ್ಲಿ ಶುಚಿತ್ವದ ಕೊರತೆ ಹಾಗೂ ತೀರಾ ಕಳಪೆ ಆಹಾರ ವಿತರಿಸಲಾಗಿದೆ’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿರುವ ಬಿಸಿಯೂಟವನ್ನು ಮುಖ್ಯಶಿಕ್ಷರು ಪರಿಶೀಲನೆ ನಡೆಸಬೇಕು. ನಿತ್ಯ ಶುಚಿತ್ವದಿಂದ ಆಹಾರ ತಯಾರಿಸಬೇಕು. ಅಡುಗೆ ಸಹಾಯಕರ ಮೇಲೆ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.</p>.<p>ಈವೇಳೆ ಎಸ್ಡಿಎಂಸಿ ಅಧ್ಯಕ್ಷ ನಾಗರಾಜ ಬೇವಿನಗಿಡ, ಗ್ರಾಮಸ್ಥರಾದ ಶಿವಲಿಂಗ ಭಂಡಾರಿ, ಸಣ್ಣ ವೆಂಕೋಬ, ಮರಿಯಪ್ಪ, ಬಸವರಾಜ, ಮಲ್ಲಪ್ಪ, ಬಸವರಾಜ, ಅಮರೇಶ, ಬಸವಂತಪ್ಪ, ಹನುಮಂತ, ಮುರ್ತೆಪ್ಪ, ತಿಮ್ಮಣ್ಣ, ಜಮದಗ್ನಿ, ತಿಮ್ಮಮ್ಮ, ಹನುಮಮ್ಮ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>