ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಟ್ಟರಾಜ ಗವಾಯಿಗಳಿಗೆ ಮರಣೋತ್ತರ ಗೌರವ ಡಾಕ್ಟರೇಟ್ ನೀಡಿ: ಬಂಡಯ್ಯ ಶಾಸ್ತ್ರಿ

Published 13 ಜನವರಿ 2024, 14:26 IST
Last Updated 13 ಜನವರಿ 2024, 14:26 IST
ಅಕ್ಷರ ಗಾತ್ರ

ಕಲಬುರಗಿ: ‘ಪುಟ್ಟರಾಜ ಗವಾಯಿಗಳಿಗೆ ಶರಣಬಸವೇಶ್ವರ ವಿಶ್ವವಿದ್ಯಾಲಯದಿಂದ ಮರಣೋತ್ತರ ಗೌರವ ಡಾಕ್ಟರೇಟ್ ನೀಡಬೇಕು’ ಎಂದು ನವ ಕರ್ನಾಟಕ ಸಂಗೀತ ಪದವೀಧರರ ಸಂಘದ ರಾಜ್ಯಾಧ್ಯಕ್ಷ ಬಂಡಯ್ಯ ಶಾಸ್ತ್ರಿ ಸುಂಟನೂರ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.  

50 ವರ್ಷಗಳ ಹಿಂದೆಯೇ ಕಲಬುರಗಿಯ ಶರಣಬಸವೇಶ್ವರರ ಪುರಾಣವನ್ನು ಕನ್ನಡ ಮತ್ತು ಸಂಸ್ಕೃತದಲ್ಲಿ ರಚಿಸಿದ ಕೀರ್ತಿ ಪುಟ್ಟರಾಜ ಗುರುಗಳಿಗೆ ಸಲ್ಲುತ್ತದೆ. ಬಸವ ಪುರಾಣ ಹಾಗೂ ಸಿದ್ಧಾಂತ ಶಿಖಾಮಣಿಯನ್ನು ಹಿಂದಿ ಭಾಷೆಗೆ ಅನುವಾದಿಸಿದ್ದಾರೆ. 70 ಪುರಾಣಗಳು ಹಾಗೂ 30 ನಾಟಕಗಳನ್ನು ರಚಿಸಿದ್ದಾರೆ. ಅಲ್ಲದೆ, ವೀರೇಶ್ವರ ಪುಣ್ಯಾಶ್ರಮದ ಸಾಧಕರು ಕಲ್ಯಾಣ ಕರ್ನಾಟಕದ ಪ್ರತಿ ಗ್ರಾಮದಲ್ಲೂ ಶರಣಬಸವೇಶ್ವರರ ಪುರಾಣ ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಪುಟ್ಟರಾಜ ಗವಾಯಿಗಳು ತ್ರಿಭಾಷಾ ಕವಿಗಳು, ಉಭಯ ಗಾಯನ ವಿಶಾರದರೂ ಹಾಗೂ ಅಂಧ–ಅನಾಥರ ಬಾಳಿಗೆ ಬೆಳಕಾಗಿದ್ದರು. ಆದ್ದರಿಂದ ಶರಣಬಸವೇಶ್ವರ ವಿಶ್ವವಿದ್ಯಾಲಯದಿಂದ ಮರಣೋತ್ತರ ಗೌರವ ಡಾಕ್ಟರೇಟ್ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT