50 ವರ್ಷಗಳ ಹಿಂದೆಯೇ ಕಲಬುರಗಿಯ ಶರಣಬಸವೇಶ್ವರರ ಪುರಾಣವನ್ನು ಕನ್ನಡ ಮತ್ತು ಸಂಸ್ಕೃತದಲ್ಲಿ ರಚಿಸಿದ ಕೀರ್ತಿ ಪುಟ್ಟರಾಜ ಗುರುಗಳಿಗೆ ಸಲ್ಲುತ್ತದೆ. ಬಸವ ಪುರಾಣ ಹಾಗೂ ಸಿದ್ಧಾಂತ ಶಿಖಾಮಣಿಯನ್ನು ಹಿಂದಿ ಭಾಷೆಗೆ ಅನುವಾದಿಸಿದ್ದಾರೆ. 70 ಪುರಾಣಗಳು ಹಾಗೂ 30 ನಾಟಕಗಳನ್ನು ರಚಿಸಿದ್ದಾರೆ. ಅಲ್ಲದೆ, ವೀರೇಶ್ವರ ಪುಣ್ಯಾಶ್ರಮದ ಸಾಧಕರು ಕಲ್ಯಾಣ ಕರ್ನಾಟಕದ ಪ್ರತಿ ಗ್ರಾಮದಲ್ಲೂ ಶರಣಬಸವೇಶ್ವರರ ಪುರಾಣ ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.