<p><strong>ಸೇಡಂ: </strong>ಸ್ಥಳೀಯ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಶನಿವಾರ (ನ. 7) ಚುನಾವಣೆ ನಡೆಯಲಿದೆ. ಸ್ಪಷ್ಟ ಬಹುಮತ ಪಡೆದ ಬಿಜೆಪಿ ಪಾಳಯದಲ್ಲಿ ಗದ್ದುಗೆ ಏರಲು ತೀವ್ರ ಪೈಪೋಟಿ ನಡೆದಿದೆ.</p>.<p>ಒಟ್ಟು 23 ಸದಸ್ಯ ಬಲವನ್ನು ಹೊಂದಿರುವ ಸೇಡಂ ಪುರಸಭೆಯಲ್ಲಿ ಬಿಜೆಪಿ– 13 ಸ್ಥಾನ, ಕಾಂಗ್ರೆಸ್-10 ಸ್ಥಾನಗಳನ್ನು ಹೊಂದಿದೆ. ಈ ಬಾರಿ ಅಧ್ಯಕ್ಷ ಸ್ಥಾನ ‘ಸಾಮಾನ್ಯ ಮಹಿಳೆ’ಗೆ ಮೀಸಲಾಗಿದ್ದರಿಂದ ಬಿಜೆಪಿಯಲ್ಲಿಯೇ ಅಧ್ಯಕ್ಷ ಸ್ಥಾನದ ಗದ್ದುಗೆ ಏರಲು ತೀವ್ರ ಪೈಪೋಟಿ ನಡೆದಿದೆ.</p>.<p>ವಾರ್ಡ್ ನಂ. 12ರ ಚನ್ನಮ್ಮ ಪಾಟೀಲ, ವಾರ್ಡ್ ನಂ. 22ರ ಸಕ್ಕುಬಾಯಿ ರಾಮದಾಸ ಪವಾರ ಮತ್ತು ವಾರ್ಡ್ ನಂ. 23ರ ಶೋಭಾ ಹೂಗಾರ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಜೊತೆಗೆ ಉಪಾಧ್ಯಕ್ಷ ಸ್ಥಾನವು ‘ಸಾಮಾನ್ಯ’ ಸ್ಥಾನಕ್ಕೆ ಮೀಸಲಾಗಿರುವುದರಿಂದ ವಾರ್ಡ್ ನಂ. 2 ರ ಶಿವಾನಂದ ಸ್ವಾಮಿ, ವಾರ್ಡ್ ನಂ. 16ರ ಚಂದ್ರಶೇಖರ ಕೆರೊಳ್ಳಿ ಮತ್ತು ವಾರ್ಡ್ ನಂ. 20ರ ಶ್ರೀನಿವಾಸ ಬಳ್ಳಾರಿ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.</p>.<p>ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಸೇರಿದಂತೆ ಬಿಜೆಪಿ ಮುಖಂಡರ ನಿರ್ಧಾರಗಳ ಮೇಲೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಕಾಂಕ್ಷಿಗಳ ಅಧೃಷ್ಟ ಖುಲಾಯಿಸಲಾಗಿದೆ.</p>.<p>‘ಚುನಾವಣೆ ಕಾಲಕ್ಕೆ ಮೊದಲು ಅಧ್ಯಕ್ಷ ಸ್ಥಾನಕ್ಕೆ ಕೈ ಎತ್ತುವ ಮೂಲಕ ಚುನಾವಣೆಯ ಪ್ರಕ್ರಿಯೆ ನಡೆಯಲಿದ್ದು, ಬಹುಮತ ಹೆಚ್ಚು ಪಡೆದ ಅಭ್ಯರ್ಥಿಯನ್ನು ಅಧ್ಯಕ್ಷರೆಂದು ಘೊಷಿಸಲಾಗುವುದು. ಇದೇ ನಿಯಮವು ಉಪಾಧ್ಯಕ್ಷ ಸ್ಥಾನಕ್ಕೆ ಅನ್ವಯವಾಗಲಿದೆ’ ಎಂದು ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಡಂ: </strong>ಸ್ಥಳೀಯ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಶನಿವಾರ (ನ. 7) ಚುನಾವಣೆ ನಡೆಯಲಿದೆ. ಸ್ಪಷ್ಟ ಬಹುಮತ ಪಡೆದ ಬಿಜೆಪಿ ಪಾಳಯದಲ್ಲಿ ಗದ್ದುಗೆ ಏರಲು ತೀವ್ರ ಪೈಪೋಟಿ ನಡೆದಿದೆ.</p>.<p>ಒಟ್ಟು 23 ಸದಸ್ಯ ಬಲವನ್ನು ಹೊಂದಿರುವ ಸೇಡಂ ಪುರಸಭೆಯಲ್ಲಿ ಬಿಜೆಪಿ– 13 ಸ್ಥಾನ, ಕಾಂಗ್ರೆಸ್-10 ಸ್ಥಾನಗಳನ್ನು ಹೊಂದಿದೆ. ಈ ಬಾರಿ ಅಧ್ಯಕ್ಷ ಸ್ಥಾನ ‘ಸಾಮಾನ್ಯ ಮಹಿಳೆ’ಗೆ ಮೀಸಲಾಗಿದ್ದರಿಂದ ಬಿಜೆಪಿಯಲ್ಲಿಯೇ ಅಧ್ಯಕ್ಷ ಸ್ಥಾನದ ಗದ್ದುಗೆ ಏರಲು ತೀವ್ರ ಪೈಪೋಟಿ ನಡೆದಿದೆ.</p>.<p>ವಾರ್ಡ್ ನಂ. 12ರ ಚನ್ನಮ್ಮ ಪಾಟೀಲ, ವಾರ್ಡ್ ನಂ. 22ರ ಸಕ್ಕುಬಾಯಿ ರಾಮದಾಸ ಪವಾರ ಮತ್ತು ವಾರ್ಡ್ ನಂ. 23ರ ಶೋಭಾ ಹೂಗಾರ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಜೊತೆಗೆ ಉಪಾಧ್ಯಕ್ಷ ಸ್ಥಾನವು ‘ಸಾಮಾನ್ಯ’ ಸ್ಥಾನಕ್ಕೆ ಮೀಸಲಾಗಿರುವುದರಿಂದ ವಾರ್ಡ್ ನಂ. 2 ರ ಶಿವಾನಂದ ಸ್ವಾಮಿ, ವಾರ್ಡ್ ನಂ. 16ರ ಚಂದ್ರಶೇಖರ ಕೆರೊಳ್ಳಿ ಮತ್ತು ವಾರ್ಡ್ ನಂ. 20ರ ಶ್ರೀನಿವಾಸ ಬಳ್ಳಾರಿ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.</p>.<p>ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಸೇರಿದಂತೆ ಬಿಜೆಪಿ ಮುಖಂಡರ ನಿರ್ಧಾರಗಳ ಮೇಲೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಕಾಂಕ್ಷಿಗಳ ಅಧೃಷ್ಟ ಖುಲಾಯಿಸಲಾಗಿದೆ.</p>.<p>‘ಚುನಾವಣೆ ಕಾಲಕ್ಕೆ ಮೊದಲು ಅಧ್ಯಕ್ಷ ಸ್ಥಾನಕ್ಕೆ ಕೈ ಎತ್ತುವ ಮೂಲಕ ಚುನಾವಣೆಯ ಪ್ರಕ್ರಿಯೆ ನಡೆಯಲಿದ್ದು, ಬಹುಮತ ಹೆಚ್ಚು ಪಡೆದ ಅಭ್ಯರ್ಥಿಯನ್ನು ಅಧ್ಯಕ್ಷರೆಂದು ಘೊಷಿಸಲಾಗುವುದು. ಇದೇ ನಿಯಮವು ಉಪಾಧ್ಯಕ್ಷ ಸ್ಥಾನಕ್ಕೆ ಅನ್ವಯವಾಗಲಿದೆ’ ಎಂದು ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>