<p><strong>ಕಲಬುರಗಿ</strong>: ನಗರದ ಹೊರವಲಯದ ಜೇವರ್ಗಿ ರಸ್ತೆಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ನಿರ್ಮಿಸಿರುವ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ‘ಪ್ರಬುದ್ಧ ಅಕಾಡೆಮಿ’ಯನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಉದ್ಘಾಟಿಸಿದರು.</p><p>ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಯುಪಿಎಸ್ಸಿ, ಕೆಪಿಎಸ್ಸಿ, ಬ್ಯಾಂಕಿಂಗ್, ಪೊಲೀಸ್ ಮತ್ತು ಇತರ ಸರ್ಕಾರಿ ನೇಮಕಾತಿಗಳಿಗೆ ಅನುಕೂಲ ಕಲ್ಪಿಸಲು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಈ ಸ್ಪರ್ಧಾತ್ಮಕ ಪರೀಕ್ಷಾಪೂರ್ವ ತರಬೇತಿ ಕೇಂದ್ರವನ್ನು ನಿರ್ಮಿಸಲಾಗಿದೆ. ನಾಲ್ಕು</p><p>1,000 ಅಭ್ಯರ್ಥಿಗಳಿಗೆ ತರಬೇತಿ ನೀಡುವ ಸಾಮರ್ಥ್ಯ ಹೊಂದಿದ್ದು, ಸದ್ಯಕ್ಕೆ 500 ಅಭ್ಯರ್ಥಿಗಳಿಗೆ ತರಬೇತಿ ನೀಡಲು ತಯಾರಿ ಮಾಡಿಕೊಳ್ಳಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ಪ್ರವೇಶ ಪರೀಕ್ಷೆ ನಡೆಸಿ, ಅರ್ಹತೆ ಆಧಾರದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.</p><p>ರಾಜ್ಯ ಸರ್ಕಾರದಿಂದ ಯುಪಿಎಸ್ಸಿ, ಕೆಪಿಎಸ್ಸಿ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷಾಪೂರ್ವ ತರಬೇತಿ ಕೇಂದ್ರವನ್ನು ಸ್ಥಾಪನೆ ಮಾಡಿರುವುದು ಇದೇ ಮೊದಲು. ತರಬೇತಿ ಕೇಂದ್ರ ಸುಮಾರು 10,449.35 ಚ.ಮೀ ವಿಸ್ತೀರ್ಣ ಹೊಂದಿದೆ. ಸಮಾಜ ಕಲ್ಯಾಣ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಒಟ್ಟು ₹29.52 ಕೋಟಿ ವೆಚ್ಚದಲ್ಲಿ ಅಕಾಡೆಮಿ ನಿರ್ಮಾಣವಾಗಿದೆ.</p><p><strong>ಸೌಲಭ್ಯಗಳೇನು?:</strong> ಮೂರು ಅಂತಸ್ತು ಇರುವ (ಜಿ+3) ಕಟ್ಟಡದಲ್ಲಿ ನಾಲ್ಕು ಸ್ಮಾರ್ಟ್ ತರಗತಿ ಕೊಠಡಿಗಳು, ಡಿಜಿಟಲ್ ಪ್ರಸ್ತುತಿಗೆ ವ್ಯವಸ್ಥೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅವಶ್ಯ ಇರುವ ಪುಸ್ತಕಗಳನ್ನು ಒಳಗೊಂಡ ಗ್ರಂಥಾಲಯ, ಡಿಜಿಟಲ್ ಲೈಬ್ರರಿ, ಆನ್ಲೈನ್ ಪರೀಕ್ಷೆಗಳಿಗಾಗಿ ಕಂಪ್ಯೂಟರ್ ಲ್ಯಾಬ್, ಅಣಕು ಪರೀಕ್ಷಾ ಸಭಾಂಗಣಗಳು, ಮಾರ್ಗದರ್ಶನ ಮತ್ತು ಸಮಾಲೋಚನಾ ಕೊಠಡಿಗಳು ಇವೆ.</p><p> ಸಚಿವ ಡಾ.ಶರಣಪ್ರಕಾಶ ಪಾಟೀಲ, ಶಾಸಕರಾದ ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ನಗರದ ಹೊರವಲಯದ ಜೇವರ್ಗಿ ರಸ್ತೆಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ನಿರ್ಮಿಸಿರುವ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ‘ಪ್ರಬುದ್ಧ ಅಕಾಡೆಮಿ’ಯನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಉದ್ಘಾಟಿಸಿದರು.</p><p>ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಯುಪಿಎಸ್ಸಿ, ಕೆಪಿಎಸ್ಸಿ, ಬ್ಯಾಂಕಿಂಗ್, ಪೊಲೀಸ್ ಮತ್ತು ಇತರ ಸರ್ಕಾರಿ ನೇಮಕಾತಿಗಳಿಗೆ ಅನುಕೂಲ ಕಲ್ಪಿಸಲು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಈ ಸ್ಪರ್ಧಾತ್ಮಕ ಪರೀಕ್ಷಾಪೂರ್ವ ತರಬೇತಿ ಕೇಂದ್ರವನ್ನು ನಿರ್ಮಿಸಲಾಗಿದೆ. ನಾಲ್ಕು</p><p>1,000 ಅಭ್ಯರ್ಥಿಗಳಿಗೆ ತರಬೇತಿ ನೀಡುವ ಸಾಮರ್ಥ್ಯ ಹೊಂದಿದ್ದು, ಸದ್ಯಕ್ಕೆ 500 ಅಭ್ಯರ್ಥಿಗಳಿಗೆ ತರಬೇತಿ ನೀಡಲು ತಯಾರಿ ಮಾಡಿಕೊಳ್ಳಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ಪ್ರವೇಶ ಪರೀಕ್ಷೆ ನಡೆಸಿ, ಅರ್ಹತೆ ಆಧಾರದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.</p><p>ರಾಜ್ಯ ಸರ್ಕಾರದಿಂದ ಯುಪಿಎಸ್ಸಿ, ಕೆಪಿಎಸ್ಸಿ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷಾಪೂರ್ವ ತರಬೇತಿ ಕೇಂದ್ರವನ್ನು ಸ್ಥಾಪನೆ ಮಾಡಿರುವುದು ಇದೇ ಮೊದಲು. ತರಬೇತಿ ಕೇಂದ್ರ ಸುಮಾರು 10,449.35 ಚ.ಮೀ ವಿಸ್ತೀರ್ಣ ಹೊಂದಿದೆ. ಸಮಾಜ ಕಲ್ಯಾಣ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಒಟ್ಟು ₹29.52 ಕೋಟಿ ವೆಚ್ಚದಲ್ಲಿ ಅಕಾಡೆಮಿ ನಿರ್ಮಾಣವಾಗಿದೆ.</p><p><strong>ಸೌಲಭ್ಯಗಳೇನು?:</strong> ಮೂರು ಅಂತಸ್ತು ಇರುವ (ಜಿ+3) ಕಟ್ಟಡದಲ್ಲಿ ನಾಲ್ಕು ಸ್ಮಾರ್ಟ್ ತರಗತಿ ಕೊಠಡಿಗಳು, ಡಿಜಿಟಲ್ ಪ್ರಸ್ತುತಿಗೆ ವ್ಯವಸ್ಥೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅವಶ್ಯ ಇರುವ ಪುಸ್ತಕಗಳನ್ನು ಒಳಗೊಂಡ ಗ್ರಂಥಾಲಯ, ಡಿಜಿಟಲ್ ಲೈಬ್ರರಿ, ಆನ್ಲೈನ್ ಪರೀಕ್ಷೆಗಳಿಗಾಗಿ ಕಂಪ್ಯೂಟರ್ ಲ್ಯಾಬ್, ಅಣಕು ಪರೀಕ್ಷಾ ಸಭಾಂಗಣಗಳು, ಮಾರ್ಗದರ್ಶನ ಮತ್ತು ಸಮಾಲೋಚನಾ ಕೊಠಡಿಗಳು ಇವೆ.</p><p> ಸಚಿವ ಡಾ.ಶರಣಪ್ರಕಾಶ ಪಾಟೀಲ, ಶಾಸಕರಾದ ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>