<p><strong>ಕಲಬುರಗಿ</strong>: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಬಗ್ಗೆ ತಪ್ಪು ಮಾಹಿತಿ ನೀಡಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲ ವಲ್ಯಾಪುರೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಭಗವಂತ ಖೂಬಾ ಅವರಲ್ಲಿ ಪಟ್ಟು ಹಿಡಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣೆ ಸಮಿತಿ (ದಿಶಾ) ಸಭೆಯಲ್ಲಿ ಪಿಎಂಜಿಎಸ್ವೈಅಧಿಕಾರಿ ಸುಭಾಷ್ ಅವರು ಶಹಾಬಾದ್ ಸಮೀಪದ ಬಂಕೂರವಾಡಲಡಾ-ಮುತ್ತಗಾ ಬಳಿ ಗ್ರಾಮೀಣ ರಸ್ತೆ ಮಾಡಿಲ್ಲ ಎಂದು ಹೇಳಿದರು.</p>.<p>ಇದರಿಂದ ಕೋಪಗೊಂಡ ವಲ್ಯಾಪುರೆ, ಕೇಂದ್ರದಿಂದ ₹ 3.5 ಕೋಟಿ ಬಿಡುಗಡೆ ಮಾಡಿದೆ. ಹಣ ಬಂದರೂ ರಸ್ತೆ ಮಾಡಿಲ್ಲವೇಕೆ? ಈ ಬಗ್ಗೆ ತಪ್ಪು ಮಾಹಿತಿ ನೀಡಿದ್ದೇಕೆ. ತಕ್ಷಣ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಾನು ಸಭೆಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದರು.</p>.<p>ಆಗ ಸಚಿವ ಖೂಬಾ, 'ಅಗತ್ಯ ಮಾಹಿತಿ ಪಡೆದು ಮಾತನಾಡಬೇಕು' ಎಂದು ಅಧಿಕಾರಿಗೆ ಸೂಚನೆ ನೀಡಿದರು.</p>.<p>ಇದರಿಂದ ಮತ್ತಷ್ಟು ಕೋಪಗೊಂಡ ವಲ್ಯಾಪುರೆ, 'ಇಷ್ಟು ಸಾವಧಾನವಾಗಿ ಹೇಳಿದರೆ ಹೇಗೆ? ತಕ್ಷಣ ಯಾವ ಕ್ರಮ ಜರುಗಿಸುತ್ತೀರಿ ಹೇಳಿ. ಇಷ್ಟು ಸಲುಗೆ ಕೊಟ್ಟರೆ ಹೇಗೆ' ಎಂದರು.</p>.<p>ಆಗ ಮಧ್ಯಪ್ರವೇಶಿಸಿದ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ಜನಪ್ರತಿನಿಧಿಗಳು ಒಂದು ವಿಷಯ ಪ್ರಸ್ತಾಪಿಸುತ್ತಾರೆ ಎಂದರೆ ಸೂಕ್ತ ಮಾಹಿತಿ ಇಟ್ಟುಕೊಂಡೇ ಹೇಳಿರುತ್ತಾರೆ. ಹಾಗಾಗಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯದೇ ಮಾತನಾಡಬಾರದು ಎಂದು ತಾಕೀತು ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಬಗ್ಗೆ ತಪ್ಪು ಮಾಹಿತಿ ನೀಡಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲ ವಲ್ಯಾಪುರೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಭಗವಂತ ಖೂಬಾ ಅವರಲ್ಲಿ ಪಟ್ಟು ಹಿಡಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣೆ ಸಮಿತಿ (ದಿಶಾ) ಸಭೆಯಲ್ಲಿ ಪಿಎಂಜಿಎಸ್ವೈಅಧಿಕಾರಿ ಸುಭಾಷ್ ಅವರು ಶಹಾಬಾದ್ ಸಮೀಪದ ಬಂಕೂರವಾಡಲಡಾ-ಮುತ್ತಗಾ ಬಳಿ ಗ್ರಾಮೀಣ ರಸ್ತೆ ಮಾಡಿಲ್ಲ ಎಂದು ಹೇಳಿದರು.</p>.<p>ಇದರಿಂದ ಕೋಪಗೊಂಡ ವಲ್ಯಾಪುರೆ, ಕೇಂದ್ರದಿಂದ ₹ 3.5 ಕೋಟಿ ಬಿಡುಗಡೆ ಮಾಡಿದೆ. ಹಣ ಬಂದರೂ ರಸ್ತೆ ಮಾಡಿಲ್ಲವೇಕೆ? ಈ ಬಗ್ಗೆ ತಪ್ಪು ಮಾಹಿತಿ ನೀಡಿದ್ದೇಕೆ. ತಕ್ಷಣ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಾನು ಸಭೆಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದರು.</p>.<p>ಆಗ ಸಚಿವ ಖೂಬಾ, 'ಅಗತ್ಯ ಮಾಹಿತಿ ಪಡೆದು ಮಾತನಾಡಬೇಕು' ಎಂದು ಅಧಿಕಾರಿಗೆ ಸೂಚನೆ ನೀಡಿದರು.</p>.<p>ಇದರಿಂದ ಮತ್ತಷ್ಟು ಕೋಪಗೊಂಡ ವಲ್ಯಾಪುರೆ, 'ಇಷ್ಟು ಸಾವಧಾನವಾಗಿ ಹೇಳಿದರೆ ಹೇಗೆ? ತಕ್ಷಣ ಯಾವ ಕ್ರಮ ಜರುಗಿಸುತ್ತೀರಿ ಹೇಳಿ. ಇಷ್ಟು ಸಲುಗೆ ಕೊಟ್ಟರೆ ಹೇಗೆ' ಎಂದರು.</p>.<p>ಆಗ ಮಧ್ಯಪ್ರವೇಶಿಸಿದ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ಜನಪ್ರತಿನಿಧಿಗಳು ಒಂದು ವಿಷಯ ಪ್ರಸ್ತಾಪಿಸುತ್ತಾರೆ ಎಂದರೆ ಸೂಕ್ತ ಮಾಹಿತಿ ಇಟ್ಟುಕೊಂಡೇ ಹೇಳಿರುತ್ತಾರೆ. ಹಾಗಾಗಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯದೇ ಮಾತನಾಡಬಾರದು ಎಂದು ತಾಕೀತು ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>