ಬಿಜೆಪಿ ಸರ್ಕಾರ ಸಮುದಾಯದವರಿಗೆ 2 ಸಚಿವ ಸ್ಥಾನ, 3 ನಿಗಮಗಳಿಗೆ ಅಧ್ಯಕ್ಷ ಸ್ಥಾನ ನೀಡಿತ್ತು. ಕಾಂಗ್ರೆಸ್ ಸರ್ಕಾರ ಒಂದೇ ಸಚಿವ ಸ್ಥಾನ ನೀಡಿದೆ. ಕಾಂಗ್ರೆಸ್ ಸರ್ಕಾರ ಈಡಿಗ ಸಮುದಾಯದ ನೋವುಗಳನ್ನು ಅರ್ಥೈಸಿಕೊಳ್ಳುತ್ತಿಲ್ಲ. ವಿಧಾನಸಭೆಯಲ್ಲಿ 10 ಸ್ಥಾನ ಕೇಳಿದರೆ, 7 ಜನರಿಗೆ ಟಿಕೆಟ್ ನೀಡಲಾಗಿತ್ತು. 4 ಜನ ಗೆದ್ದಿದ್ದಾರೆ. ಕಾಂಗ್ರೆಸ್ ಸರ್ಕಾರ ಸಮಾಜದ ಬೇಡಿಕೆಗಳನ್ನು ಕಡೆಗಣಿಸಿದರೆ, ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಬೆಟ್ಟದಬಾಳಕುಂದಿ ಗ್ರಾಮದಿಂದ ಬೆಂಗಳೂರು ವಿಧಾನಸೌಧದವರೆಗೆ ಮಾರ್ಚ್ ಎರಡನೇ ವಾರದಲ್ಲಿ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.