<p><strong>ಚಿತ್ತಾಪುರ (ಕಲಬುರಗಿ ಜಿಲ್ಲೆ):</strong> ತಾಲ್ಲೂಕಿನ ಕರದಾಳ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದಿಂದ ಬೆಂಗಳೂರಿನವರೆಗೆ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ಕೈಗೊಂಡಿರುವ ಪಾದಯಾತ್ರೆಯ ಎರಡನೇ ದಿನವಾದ ಬುಧವಾರ ಬೆಳಿಗ್ಗೆ ಚಿತ್ತಾಪುರದಿಂದ ಶುರುವಾಯಿತು.</p><p>ನಾರಾಯಣಗುರು ಪ್ರತಿಮೆ ಹೊತ್ತ ಸಾರೋಟದೊಂದಿಗೆ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯು ಮೊದಲ ದಿನ ಕರದಾಳದಿಂದ 9 ಕಿ.ಮೀ ದಾರಿ ಕ್ರಮಿಸಿ ಚಿತ್ತಾಪುರ ತಲುಪಿತ್ತು. ಬಳಿಕ ಬಹಿರಂಗ ಸಭೆ ನಡೆದಿತ್ತು. ನಂತರ ಸ್ವಾಮೀಜಿ ಸೇರಿದಂತೆ ಪಾದಯಾತ್ರೆಯಲ್ಲಿ ಪಾಲ್ಗೊಂಡವರು ಪಟ್ಟಣದಲ್ಲಿಯೇ ವಾಸ್ತವ್ಯ ಹೂಡಿದ್ದರು.</p><p>ಬುಧವಾರ ಬೆಳಗ್ಗೆ ಸ್ವಾಮೀಜಿ ಪೂಜಾ ಕೈಂಕರ್ಯ, ಉಪಾಹಾರ ಮುಗಿಸಿಕೊಂಡು ನಾರಾಯಣ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಎರಡನೇ ದಿನದ ಪಾದಯಾತ್ರೆಯು ಚಿತ್ತಾಪುರದಿಂದ ಶಹಾಬಾದ್ ನಗರದತ್ತ ಪಯಣಿಸಿತು.</p><p>ತಾಲ್ಲೂಕಿನ ಈಡಿಗ ಸಮಾಜದ ಮುಖಂಡರಾದ ಸುರೇಶ ಗುತ್ತೇದಾರ, ಶ್ರೀಮಂತ ಗುತ್ತೇದಾರ ಸೇರಿದಂತೆ ಅನೇಕರು ಸ್ವಾಮೀಜಿಯೊಂದಿಗೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿ ಸಾಥ್ ನೀಡಿದರು.</p><p>ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ₹500 ಕೋಟಿ ಬಿಡುಗಡೆ, ಎಸ್ಟಿಗೆ ಸೇರ್ಪಡೆ ಸೇರಿ 18 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈಡಿಗ, ಬಿಲ್ಲವ, ನಾಮಧಾರಿ, ಧೀವರ, ತೀಯ ಒಳಗೊಂಡು 26 ಪಂಗಡಗಳು ಮತ್ತೆ ಹೋರಾಟ ಹಾದಿ ತುಳಿದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ತಾಪುರ (ಕಲಬುರಗಿ ಜಿಲ್ಲೆ):</strong> ತಾಲ್ಲೂಕಿನ ಕರದಾಳ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದಿಂದ ಬೆಂಗಳೂರಿನವರೆಗೆ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ಕೈಗೊಂಡಿರುವ ಪಾದಯಾತ್ರೆಯ ಎರಡನೇ ದಿನವಾದ ಬುಧವಾರ ಬೆಳಿಗ್ಗೆ ಚಿತ್ತಾಪುರದಿಂದ ಶುರುವಾಯಿತು.</p><p>ನಾರಾಯಣಗುರು ಪ್ರತಿಮೆ ಹೊತ್ತ ಸಾರೋಟದೊಂದಿಗೆ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯು ಮೊದಲ ದಿನ ಕರದಾಳದಿಂದ 9 ಕಿ.ಮೀ ದಾರಿ ಕ್ರಮಿಸಿ ಚಿತ್ತಾಪುರ ತಲುಪಿತ್ತು. ಬಳಿಕ ಬಹಿರಂಗ ಸಭೆ ನಡೆದಿತ್ತು. ನಂತರ ಸ್ವಾಮೀಜಿ ಸೇರಿದಂತೆ ಪಾದಯಾತ್ರೆಯಲ್ಲಿ ಪಾಲ್ಗೊಂಡವರು ಪಟ್ಟಣದಲ್ಲಿಯೇ ವಾಸ್ತವ್ಯ ಹೂಡಿದ್ದರು.</p><p>ಬುಧವಾರ ಬೆಳಗ್ಗೆ ಸ್ವಾಮೀಜಿ ಪೂಜಾ ಕೈಂಕರ್ಯ, ಉಪಾಹಾರ ಮುಗಿಸಿಕೊಂಡು ನಾರಾಯಣ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಎರಡನೇ ದಿನದ ಪಾದಯಾತ್ರೆಯು ಚಿತ್ತಾಪುರದಿಂದ ಶಹಾಬಾದ್ ನಗರದತ್ತ ಪಯಣಿಸಿತು.</p><p>ತಾಲ್ಲೂಕಿನ ಈಡಿಗ ಸಮಾಜದ ಮುಖಂಡರಾದ ಸುರೇಶ ಗುತ್ತೇದಾರ, ಶ್ರೀಮಂತ ಗುತ್ತೇದಾರ ಸೇರಿದಂತೆ ಅನೇಕರು ಸ್ವಾಮೀಜಿಯೊಂದಿಗೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿ ಸಾಥ್ ನೀಡಿದರು.</p><p>ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ₹500 ಕೋಟಿ ಬಿಡುಗಡೆ, ಎಸ್ಟಿಗೆ ಸೇರ್ಪಡೆ ಸೇರಿ 18 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈಡಿಗ, ಬಿಲ್ಲವ, ನಾಮಧಾರಿ, ಧೀವರ, ತೀಯ ಒಳಗೊಂಡು 26 ಪಂಗಡಗಳು ಮತ್ತೆ ಹೋರಾಟ ಹಾದಿ ತುಳಿದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>