ರಸಗೊಬ್ಬರ, ಕೀಟನಾಶಕ ಮತ್ತು ಕ್ರಿಮಿನಾಶಕ ಮತ್ತು ಕೃಷಿ ಯಂತ್ರೋಪಕರಣಗಳ ಮೇಲಿನ ಜಿಎಸ್ಟಿಯನ್ನು ಹಿಂಪಡೆಯಬೇಕು. ಸಾಮಾನ್ಯ ತೆರಿಗೆದಾತರಿಗೆ ಅನುಕೂಲವಾಗುವಂತೆ ಆದಾಯ ತೆರಿಗೆಯ ವಿನಾಯಿತಿ ಮಿತಿಯನ್ನು ₹5 ಲಕ್ಷಕ್ಕೆ ಹೆಚ್ಚಿಸಬೇಕು ಎಂದು ಎಚ್ಕೆಸಿಸಿಐ ಅಧ್ಯಕ್ಷ ಅಮರನಾಥ ಸಿ.ಪಾಟೀಲ, ಗೌರವ ಕಾರ್ಯದರ್ಶಿ ಶಶಿಕಾಂತ ಬಿ.ಪಾಟೀಲ, ತೆರಿಗೆ ಉಪಸಮಿತಿ ಚೇರಮನ್ ಗುರುದೇವ ಎ.ದೇಸಾಯಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.