ಕಲಬುರಗಿ: ‘ಬಿಜೆಪಿ ಕೋಮುದ್ವೇಷದ ಮಧ್ಯೆ ಚುನಾವಣೆ ನಡೆಸುತ್ತಿದ್ದರೆ, ಕಾಂಗ್ರೆಸ್ ದಲಿತರು ಮತ್ತು ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಂಡು ರಾಜಕೀಯ ಮಾಡುತ್ತಿದೆ. ಹಾಗಾಗಿ, ಜನ ಬದಲಾವಣೆ ಬಯಸುತ್ತಿದ್ದು, ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ’ ಎಂದು ಬಹುಜನ ಮತದಾರರ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಶರಣಬಸಪ್ಪ ಪಿ.ಸೂಗೂರ ತಿಳಿಸಿದರು.