ಯತ್ನಾಳ ಆರೋಪ: ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ಬಿ.ಆರ್ ಪಾಟೀಲ್ ಒತ್ತಾಯ

ಕಲಬುರಗಿ: ‘ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಮ್ಮನ್ನು ಮುಖ್ಯಮಂತ್ರಿ ಮಾಡಲು ₹ 2,500 ಕೋಟಿ ಕೇಳಲಾಗಿತ್ತು ಎಂಬುದು ಗಂಭೀರ ಆರೋಪವಾಗಿದ್ದು, ಇದು ಪ್ರಜಾಪ್ರಭುತ್ವದ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಆದ್ದರಿಂದ ಈ ಕೂಡಲೇ ರಾಷ್ಟ್ರಪತಿ ಮಧ್ಯಪ್ರವೇಶಿಸಬೇಕು’ ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ ಒತ್ತಾಯಿಸಿದ್ದಾರೆ.
‘ಯತ್ನಾಳ ಸಾಮಾನ್ಯ ವ್ಯಕ್ತಿಯಲ್ಲ. ಬಿಜೆಪಿಯ ಪ್ರಮುಖ ನಾಯಕ, ಕೇಂದ್ರದ ಮಾಜಿ ಸಚಿವರಾಗಿದ್ದವರು. ಅವರ ಆರೋಪದಲ್ಲಿ ಹುರುಳಿರಬೇಕು. ಆದ್ದರಿಂದ ರಾಷ್ಟ್ರಪತಿ ಅವರು ಈ ಬಗ್ಗೆ ವಿಸ್ತೃತ ತನಿಖೆಗೆ ಆದೇಶಿಸಬೇಕು. ಯಾವುದೇ ಸಂವಿಧಾನಾತ್ಮಕ ಹುದ್ದೆಗಳನ್ನು ಹಣಕ್ಕಾಗಿ ಮಾರುವುದು ಅಕ್ಷಮ್ಯ. ಯಾರು ಹಣ ಕೇಳಿದ್ದರು ಎಂಬುದು ಯತ್ನಾಳ ಅವರು ಬಹಿರಂಗಪಡಿಸಲಿ’ ಎಂದು ಅವರು ಆಗ್ರಹಿಸಿದ್ದಾರೆ.
‘ಬಸವನಗೌಡ ಪಾಟೀಲ ಅವರು ನಿರಂತರವಾಗಿ ಪಕ್ಷವಿರೋಧಿ ಹೇಳಿಕೆ ನೀಡುತ್ತಿದ್ದರೂ ಪಕ್ಷದ ಹೈಕಮಾಂಡ್ ಅವರ ವಿರುದ್ಧ ಯಾವುದೇ
ಕ್ರಮ ಜರುಗಿಸಿಲ್ಲ. ಬಹುಶಃ ಆರ್ಎಸ್ಎಸ್ ಯತ್ನಾಳ ಅವರನ್ನು ಮುಂದಿಟ್ಟುಕೊಂಡು ಆಟವಾಡಿಸುತ್ತಿರಬಹುದು ಎಂಬ ಗುಮಾನಿ ಇದೆ. ಮುಖ್ಯಮಂತ್ರಿ ಹುದ್ದೆಗೆ ₹ 2,500 ಕೋಟಿ ಆಮಿಷ ಸೇರಿ ಸರ್ಕಾರದ ಇತ್ತೀಚಿನ ಹಗರಣದ ಬಗ್ಗೆ ತನಿಖೆ ನಡೆಸಿ ಸತ್ಯಾಂಶ ಬಯಲು ಮಾಡಬೇಕು’ ಎಂದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.