<p><strong>ಕಲಬುರಗಿ: </strong>‘ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಮ್ಮನ್ನು ಮುಖ್ಯಮಂತ್ರಿ ಮಾಡಲು ₹ 2,500 ಕೋಟಿ ಕೇಳಲಾಗಿತ್ತು ಎಂಬುದು ಗಂಭೀರ ಆರೋಪವಾಗಿದ್ದು, ಇದು ಪ್ರಜಾಪ್ರಭುತ್ವದ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಆದ್ದರಿಂದ ಈ ಕೂಡಲೇ ರಾಷ್ಟ್ರಪತಿ ಮಧ್ಯಪ್ರವೇಶಿಸಬೇಕು’ ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ ಒತ್ತಾಯಿಸಿದ್ದಾರೆ.</p>.<p>‘ಯತ್ನಾಳ ಸಾಮಾನ್ಯ ವ್ಯಕ್ತಿಯಲ್ಲ. ಬಿಜೆಪಿಯ ಪ್ರಮುಖ ನಾಯಕ, ಕೇಂದ್ರದ ಮಾಜಿ ಸಚಿವರಾಗಿದ್ದವರು. ಅವರ ಆರೋಪದಲ್ಲಿ ಹುರುಳಿರಬೇಕು. ಆದ್ದರಿಂದ ರಾಷ್ಟ್ರಪತಿ ಅವರು ಈ ಬಗ್ಗೆ ವಿಸ್ತೃತ ತನಿಖೆಗೆ ಆದೇಶಿಸಬೇಕು. ಯಾವುದೇ ಸಂವಿಧಾನಾತ್ಮಕ ಹುದ್ದೆಗಳನ್ನು ಹಣಕ್ಕಾಗಿ ಮಾರುವುದು ಅಕ್ಷಮ್ಯ. ಯಾರು ಹಣ ಕೇಳಿದ್ದರು ಎಂಬುದು ಯತ್ನಾಳ ಅವರು ಬಹಿರಂಗಪಡಿಸಲಿ’ ಎಂದು ಅವರು ಆಗ್ರಹಿಸಿದ್ದಾರೆ.</p>.<p>‘ಬಸವನಗೌಡ ಪಾಟೀಲ ಅವರು ನಿರಂತರವಾಗಿ ಪಕ್ಷವಿರೋಧಿ ಹೇಳಿಕೆ ನೀಡುತ್ತಿದ್ದರೂ ಪಕ್ಷದ ಹೈಕಮಾಂಡ್ ಅವರ ವಿರುದ್ಧ ಯಾವುದೇ<br />ಕ್ರಮ ಜರುಗಿಸಿಲ್ಲ. ಬಹುಶಃ ಆರ್ಎಸ್ಎಸ್ ಯತ್ನಾಳ ಅವರನ್ನು ಮುಂದಿಟ್ಟುಕೊಂಡು ಆಟವಾಡಿಸುತ್ತಿರಬಹುದು ಎಂಬ ಗುಮಾನಿ ಇದೆ. ಮುಖ್ಯಮಂತ್ರಿ ಹುದ್ದೆಗೆ ₹ 2,500 ಕೋಟಿ ಆಮಿಷ ಸೇರಿ ಸರ್ಕಾರದ ಇತ್ತೀಚಿನ ಹಗರಣದ ಬಗ್ಗೆ ತನಿಖೆ ನಡೆಸಿ ಸತ್ಯಾಂಶ ಬಯಲು ಮಾಡಬೇಕು’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ: </strong>‘ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಮ್ಮನ್ನು ಮುಖ್ಯಮಂತ್ರಿ ಮಾಡಲು ₹ 2,500 ಕೋಟಿ ಕೇಳಲಾಗಿತ್ತು ಎಂಬುದು ಗಂಭೀರ ಆರೋಪವಾಗಿದ್ದು, ಇದು ಪ್ರಜಾಪ್ರಭುತ್ವದ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಆದ್ದರಿಂದ ಈ ಕೂಡಲೇ ರಾಷ್ಟ್ರಪತಿ ಮಧ್ಯಪ್ರವೇಶಿಸಬೇಕು’ ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ ಒತ್ತಾಯಿಸಿದ್ದಾರೆ.</p>.<p>‘ಯತ್ನಾಳ ಸಾಮಾನ್ಯ ವ್ಯಕ್ತಿಯಲ್ಲ. ಬಿಜೆಪಿಯ ಪ್ರಮುಖ ನಾಯಕ, ಕೇಂದ್ರದ ಮಾಜಿ ಸಚಿವರಾಗಿದ್ದವರು. ಅವರ ಆರೋಪದಲ್ಲಿ ಹುರುಳಿರಬೇಕು. ಆದ್ದರಿಂದ ರಾಷ್ಟ್ರಪತಿ ಅವರು ಈ ಬಗ್ಗೆ ವಿಸ್ತೃತ ತನಿಖೆಗೆ ಆದೇಶಿಸಬೇಕು. ಯಾವುದೇ ಸಂವಿಧಾನಾತ್ಮಕ ಹುದ್ದೆಗಳನ್ನು ಹಣಕ್ಕಾಗಿ ಮಾರುವುದು ಅಕ್ಷಮ್ಯ. ಯಾರು ಹಣ ಕೇಳಿದ್ದರು ಎಂಬುದು ಯತ್ನಾಳ ಅವರು ಬಹಿರಂಗಪಡಿಸಲಿ’ ಎಂದು ಅವರು ಆಗ್ರಹಿಸಿದ್ದಾರೆ.</p>.<p>‘ಬಸವನಗೌಡ ಪಾಟೀಲ ಅವರು ನಿರಂತರವಾಗಿ ಪಕ್ಷವಿರೋಧಿ ಹೇಳಿಕೆ ನೀಡುತ್ತಿದ್ದರೂ ಪಕ್ಷದ ಹೈಕಮಾಂಡ್ ಅವರ ವಿರುದ್ಧ ಯಾವುದೇ<br />ಕ್ರಮ ಜರುಗಿಸಿಲ್ಲ. ಬಹುಶಃ ಆರ್ಎಸ್ಎಸ್ ಯತ್ನಾಳ ಅವರನ್ನು ಮುಂದಿಟ್ಟುಕೊಂಡು ಆಟವಾಡಿಸುತ್ತಿರಬಹುದು ಎಂಬ ಗುಮಾನಿ ಇದೆ. ಮುಖ್ಯಮಂತ್ರಿ ಹುದ್ದೆಗೆ ₹ 2,500 ಕೋಟಿ ಆಮಿಷ ಸೇರಿ ಸರ್ಕಾರದ ಇತ್ತೀಚಿನ ಹಗರಣದ ಬಗ್ಗೆ ತನಿಖೆ ನಡೆಸಿ ಸತ್ಯಾಂಶ ಬಯಲು ಮಾಡಬೇಕು’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>