<p><strong>ಕಲಬುರ್ಗಿ</strong>: ‘ಆಳುವವನಿಗೆ ಕೇಳುವವನಿರಬೇಕು ಎಂಬ ಮಾತಿನಂತೆ ಜನಪ್ರತಿನಿಧಿಗಳನ್ನು ಪತ್ರಕರ್ತರು ಪ್ರಶ್ನಿಸುತ್ತಿರಬೇಕು. ಇದರಿಂದ ನಾವು ಜನರ ಸಮಸ್ಯೆಗಳಿಗೆ ತಕ್ಷಣಕ್ಕೆ ಸ್ಪಂದಿಸಲು ಸಹಕಾರಿಯಾಗುತ್ತದೆ’ ಎಂದು ಸಂಸದ ಡಾ. ಉಮೇಶ ಜಾಧವ ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕವು ಪತ್ರಿಕಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪತ್ರಕರ್ತರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಅವರು ಮಾತನಾಡಿದರು.</p>.<p>‘ಹಲವು ವರ್ಷಗಳ ಹಿಂದೆ ಚಿಂಚೋಳಿ ತಾಲ್ಲೂಕಿನ ಕುಂಚಾವರಂನಲ್ಲಿ ಮಕ್ಕಳ ಮಾರಾಟ ಪ್ರಕರಣದ ಬಗ್ಗೆ ಪತ್ರಕರ್ತರು ಸರಣಿ ವರದಿ ಮಾಡಿದ್ದರಿಂದ ಅದು ದೇಶದಾದ್ಯಂತ ಚರ್ಚೆಯಾಗಿ, ಆ ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವ ಯತ್ನಗಳು ನಡೆದವು’ ಎಂದರು.</p>.<p>‘ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರಿಗೆ ತಾವು ಮನವಿ ಸಲ್ಲಿಸಿದ್ದೀರಿ. ಬೇಡಿಕೆಗಳನ್ನು ಈಡೇರಿಸುವ ಕುರಿತು ನಿರಾಣಿ ಅವರು ನನ್ನೊಂದಿಗೆ ಚರ್ಚಿಸಿದ್ದಾರೆ’ ಎಂದರು.</p>.<p>ಹಿರಿಯ ಪತ್ರಕರ್ತ ಜಿ.ಎನ್. ಮೋಹನ್ ಮಾತನಾಡಿ, ‘ನಾನು ಕಲಬುರ್ಗಿಯಲ್ಲಿ ಪತ್ರಕರ್ತನಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ ಹಲವು ವಿಚಾರಗಳನ್ನು ಅರಿಯಲು ಸಾಧ್ಯವಾಯಿತು. ವಿವಿಧ ಮಾಧ್ಯಮಗಳಲ್ಲಿ ಈ ಭಾಗದ ಪತ್ರಕರ್ತರ ಸಂಖ್ಯೆ ಕಡಿಮೆ ಇರುವುದರಿಂದ ಈ ಭಾಗದ ವಿಚಾರಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಆದ್ಯತೆ ಸಿಗುತ್ತಿಲ್ಲ’ ಎಂದರು.</p>.<p>ಜೀವಮಾನದ ಸಾಧನೆಗಾಗಿ ಹಿರಿಯ ಪತ್ರಕರ್ತರಾದ ರಾಮಕೃಷ್ಣ ಬಡಶೇಷಿ ಮತ್ತು ಬಾಬುರಾವ ಯಡ್ರಾಮಿ ಅವರಿಗೆ ವಿ.ಎನ್.ಕಾಗಲಕರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>‘ಪ್ರಜಾವಾಣಿ’ಯ ಸೇಡಂ ವರದಿಗಾರ ಅವಿನಾಶ ಬೋರಂಚಿ, ಪತ್ರಕರ್ತರಾದ ಕುಮಾರ ಬುರಡಿಕಟ್ಟಿ, ನಾಗರಾಜ ಹೂವಿನಹಳ್ಳಿ, ಬೌದ್ಧಪ್ರಿಯ ನಾಗಸೇನ, ರಾಜಶೇಖರಯ್ಯ ಹೊಕ್ರಾಣಿಮಠ, ಶಿವರಾಜ ವಾಲಿ, ಛಾಯಾಗ್ರಾಹಕರಾದ ಶಿವಶರಣಪ್ಪ ಬೆಣ್ಣೂರ ಮತ್ತು ಗಂಗಾಧರ ಹಿರೇಮಠ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಶಾಸಕಿ ಕನೀಜ್ ಫಾತಿಮಾ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಜಿಲ್ಲಾ ಘಟಕದ ಅಧ್ಯಕ್ಷ ಭವಾನಿಸಿಂಗ್ ಠಾಕೂರ್ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.</p>.<p>‘ಮೃತ ಪತ್ರಕರ್ತರ ಕುಟುಂಬಕ್ಕೆ ನೆರವು’</p>.<p>‘ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಪತ್ರಕರ್ತರಿಗೆ ಸರ್ಕಾರದಿಂದ ಆರ್ಥಿಕ ನೆರವು ಕೊಡಿಸುವುದು ಸಾಕಷ್ಟು ಸವಾಲಿನ ಕೆಲಸವಾಗಿತ್ತು’ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರ ತಿಳಿಸಿದರು.</p>.<p>‘ತಲಾ ₹ 5 ಲಕ್ಷದಂತೆ ಕೋವಿಡ್ನಿಂದ ಮೃತಪಟ್ಟ 45 ಪತ್ರಕರ್ತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉದಾರವಾಗಿ ನೆರವು ನೀಡಿದರು. ಮನವಿಗೆ ಸ್ಪಂದಿಸಿ ವಿವಿಧ ಪತ್ರಿಕೆಗಳಿಗೆ ನೀಡಬೇಕಿದ್ದ ಜಾಹೀರಾತು ಬಾಕಿ ಮೊತ್ತ ₹ 56 ಕೋಟಿಯನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಿದರು. ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾತ್ರ ಸೀಮಿತವಾಗಿದ್ದ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ತಾಲ್ಲೂಕು ಹಾಗೂ ಗ್ರಾಮೀಣ ಭಾಗದ ಪತ್ರಕರ್ತರಿಗೂ ವಿತರಿಸಲು ಮುಖ್ಯಮಂತ್ರಿ ಸೂಚಿಸಿದರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ‘ಆಳುವವನಿಗೆ ಕೇಳುವವನಿರಬೇಕು ಎಂಬ ಮಾತಿನಂತೆ ಜನಪ್ರತಿನಿಧಿಗಳನ್ನು ಪತ್ರಕರ್ತರು ಪ್ರಶ್ನಿಸುತ್ತಿರಬೇಕು. ಇದರಿಂದ ನಾವು ಜನರ ಸಮಸ್ಯೆಗಳಿಗೆ ತಕ್ಷಣಕ್ಕೆ ಸ್ಪಂದಿಸಲು ಸಹಕಾರಿಯಾಗುತ್ತದೆ’ ಎಂದು ಸಂಸದ ಡಾ. ಉಮೇಶ ಜಾಧವ ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕವು ಪತ್ರಿಕಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪತ್ರಕರ್ತರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಅವರು ಮಾತನಾಡಿದರು.</p>.<p>‘ಹಲವು ವರ್ಷಗಳ ಹಿಂದೆ ಚಿಂಚೋಳಿ ತಾಲ್ಲೂಕಿನ ಕುಂಚಾವರಂನಲ್ಲಿ ಮಕ್ಕಳ ಮಾರಾಟ ಪ್ರಕರಣದ ಬಗ್ಗೆ ಪತ್ರಕರ್ತರು ಸರಣಿ ವರದಿ ಮಾಡಿದ್ದರಿಂದ ಅದು ದೇಶದಾದ್ಯಂತ ಚರ್ಚೆಯಾಗಿ, ಆ ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವ ಯತ್ನಗಳು ನಡೆದವು’ ಎಂದರು.</p>.<p>‘ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರಿಗೆ ತಾವು ಮನವಿ ಸಲ್ಲಿಸಿದ್ದೀರಿ. ಬೇಡಿಕೆಗಳನ್ನು ಈಡೇರಿಸುವ ಕುರಿತು ನಿರಾಣಿ ಅವರು ನನ್ನೊಂದಿಗೆ ಚರ್ಚಿಸಿದ್ದಾರೆ’ ಎಂದರು.</p>.<p>ಹಿರಿಯ ಪತ್ರಕರ್ತ ಜಿ.ಎನ್. ಮೋಹನ್ ಮಾತನಾಡಿ, ‘ನಾನು ಕಲಬುರ್ಗಿಯಲ್ಲಿ ಪತ್ರಕರ್ತನಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ ಹಲವು ವಿಚಾರಗಳನ್ನು ಅರಿಯಲು ಸಾಧ್ಯವಾಯಿತು. ವಿವಿಧ ಮಾಧ್ಯಮಗಳಲ್ಲಿ ಈ ಭಾಗದ ಪತ್ರಕರ್ತರ ಸಂಖ್ಯೆ ಕಡಿಮೆ ಇರುವುದರಿಂದ ಈ ಭಾಗದ ವಿಚಾರಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಆದ್ಯತೆ ಸಿಗುತ್ತಿಲ್ಲ’ ಎಂದರು.</p>.<p>ಜೀವಮಾನದ ಸಾಧನೆಗಾಗಿ ಹಿರಿಯ ಪತ್ರಕರ್ತರಾದ ರಾಮಕೃಷ್ಣ ಬಡಶೇಷಿ ಮತ್ತು ಬಾಬುರಾವ ಯಡ್ರಾಮಿ ಅವರಿಗೆ ವಿ.ಎನ್.ಕಾಗಲಕರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>‘ಪ್ರಜಾವಾಣಿ’ಯ ಸೇಡಂ ವರದಿಗಾರ ಅವಿನಾಶ ಬೋರಂಚಿ, ಪತ್ರಕರ್ತರಾದ ಕುಮಾರ ಬುರಡಿಕಟ್ಟಿ, ನಾಗರಾಜ ಹೂವಿನಹಳ್ಳಿ, ಬೌದ್ಧಪ್ರಿಯ ನಾಗಸೇನ, ರಾಜಶೇಖರಯ್ಯ ಹೊಕ್ರಾಣಿಮಠ, ಶಿವರಾಜ ವಾಲಿ, ಛಾಯಾಗ್ರಾಹಕರಾದ ಶಿವಶರಣಪ್ಪ ಬೆಣ್ಣೂರ ಮತ್ತು ಗಂಗಾಧರ ಹಿರೇಮಠ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಶಾಸಕಿ ಕನೀಜ್ ಫಾತಿಮಾ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಜಿಲ್ಲಾ ಘಟಕದ ಅಧ್ಯಕ್ಷ ಭವಾನಿಸಿಂಗ್ ಠಾಕೂರ್ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.</p>.<p>‘ಮೃತ ಪತ್ರಕರ್ತರ ಕುಟುಂಬಕ್ಕೆ ನೆರವು’</p>.<p>‘ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಪತ್ರಕರ್ತರಿಗೆ ಸರ್ಕಾರದಿಂದ ಆರ್ಥಿಕ ನೆರವು ಕೊಡಿಸುವುದು ಸಾಕಷ್ಟು ಸವಾಲಿನ ಕೆಲಸವಾಗಿತ್ತು’ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರ ತಿಳಿಸಿದರು.</p>.<p>‘ತಲಾ ₹ 5 ಲಕ್ಷದಂತೆ ಕೋವಿಡ್ನಿಂದ ಮೃತಪಟ್ಟ 45 ಪತ್ರಕರ್ತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉದಾರವಾಗಿ ನೆರವು ನೀಡಿದರು. ಮನವಿಗೆ ಸ್ಪಂದಿಸಿ ವಿವಿಧ ಪತ್ರಿಕೆಗಳಿಗೆ ನೀಡಬೇಕಿದ್ದ ಜಾಹೀರಾತು ಬಾಕಿ ಮೊತ್ತ ₹ 56 ಕೋಟಿಯನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಿದರು. ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾತ್ರ ಸೀಮಿತವಾಗಿದ್ದ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ತಾಲ್ಲೂಕು ಹಾಗೂ ಗ್ರಾಮೀಣ ಭಾಗದ ಪತ್ರಕರ್ತರಿಗೂ ವಿತರಿಸಲು ಮುಖ್ಯಮಂತ್ರಿ ಸೂಚಿಸಿದರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>