ಕಲಬುರ್ಗಿ: ‘ದಲಿತ ಮಾದಿಗ ಸಮನ್ವಯ ಸಮಿತಿ ವತಿಯಿಂದ ಫೆ.28ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜಿಲ್ಲೆಯ ಪರಿಶಿಷ್ಟ ಸಮಾಜದ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ’ ಎಂದು ಸಮಿತಿ ಅಧ್ಯಕ್ಷ ಲಿಂಗರಾಜ ತಾರಫೈಲ್ ತಿಳಿಸಿದರು.
‘ಜಿಲ್ಲೆಯಲ್ಲಿ 250ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಸದಸ್ಯರಿದ್ದು ಎಲ್ಲರನ್ನೂ ಅಭಿನಂದಿಸಲು ಉದ್ದೇಶಿಸಲಾಗಿದೆ. ಆದಿಜಾಂಬವ ಮಠದ ಮುನಿಸ್ವಾಮಿ ದೇಶಿಕೇಂದ್ರ ಅವರು ಸಾನ್ನಿಧ್ಯ ವಹಿಸಲಿದ್ದಾರೆ.ಶಾಸಕ ಪ್ರಯಾಂಕ್ ಖರ್ಗೆ ಉದ್ಘಾಟಿಸುವರು. ಕಾಂಗ್ರೆಸ್ ಮುಖಂಡ ಡಾ.ಶರಣಪ್ರಕಾಶ ಪಾಟೀಲ ಅಧ್ಯಕ್ಷತೆ ವಹಿಸುವರು’ ಎಂದು ಅವರು ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರು, ಹಿರಿಯ ಮುಖಂಡ ಕೆ.ಬಿ.ಶಾಣಪ್ಪ, ಶಾಸಕ ಡಾ.ಅಜಯ ಸಿಂಗ್, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ’ ಎಂದರು.
ಸಮಿತಿ ಮುಖಂಡರಾದ ಬಸವರಾಜ ಜವಳಿ, ಗೋಪಾಲರಾವ್ ಕಟ್ಟಿಮನಿ, ಅಶೋಕ ಕಟ್ಟಿ, ದಿಗಂಬರ ತ್ರಿಮೂರ್ತಿ, ಸುಭಾಷ ಕಾಂಬಳೆ ಇದ್ದರು.