ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಿನೇ ದಿನೇ ನೀರಿನ ಕೊರತೆ ಜನರನ್ನು ಕಾಡುತ್ತಿದೆ. ಕೊಳವೆಬಾವಿಗಳನ್ನು ಕೊರೆದು ನೀರೆತ್ತುತ್ತಿರುವುದರಿಂದ ಅಂತರ್ಜಲ ಮಟ್ಟವೂ ಕುಸಿಯುತ್ತಿದೆ. ಇದಕ್ಕಾಗಿ ಮಳೆನೀರು ಬಿದ್ದಲ್ಲಿಯೇ ಇಂಗಿಸುವ ಕಡಿಮೆ ಖರ್ಚಿನ ತಂತ್ರಜ್ಞಾನಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾಗಿದೆ. ಇದಕ್ಕೆ ಪೂರಕವಾಗಿ ತೆಲಂಗಾಣದ ನಲ್ಗೊಂಡ, ಸಿದ್ದಿಪೇಟ್, ರಂಗಾರೆಡ್ಡಿ, ಕರೀಂನಗರ ಜಿಲ್ಲೆಗಳಲ್ಲಿ ಒಟ್ಟು 181 ನೀರು ಮರುಪೂರಣ ಘಟಕಗಳನ್ನು ಅಳವಡಿಸಲಾಗಿದೆ. ಇದಕ್ಕಾಗಿ ತೆಲಂಗಾಣ ಸರ್ಕಾರ ನಿಗಮಕ್ಕೆ ₹ 70 ಕೋಟಿ ಬಿಡುಗಡೆ ಮಾಡಿದೆ. ಈ ಹಣದಲ್ಲಿ 1600 ಸ್ಥಳಗಳಲ್ಲಿ ನೀರು ಸಂಗ್ರಹಿಸುವ ವ್ಯವಸ್ಥೆಯನ್ನು ಮಾಡಲಾಗುವುದು’ ಎಂದರು.