ಕಲಬುರ್ಗಿ: ‘ಕೋವಿಡ್–19 ಸೋಂಕಿತರು ಹಾಗೂ ಅವರೊಂದಿಗೆ ನೇರ ಸಂಪರ್ಕಕ್ಕೆ ಬಂದವರನ್ನು ‘ಅಪರಾಧಿಗಳು’ ಎಂಬಂತೆ ನೋಡುವ ದೃಷ್ಟಿಕೋನ ಬದಲಾಗಬೇಕು. ರೋಗ ಯಾರಿಗಾದರೂ ಬರಬಹುದು. ಹಾಗಾಗಿ, ಇದರಲ್ಲಿ ಯಾರನ್ನೂ ದೂಷಿಸುವ, ದೂರ ತಳ್ಳುವ ಕೆಲಸ ಸಲ್ಲದು. ಅಗತ್ಯವಿದ್ದವರ ಸಹಾಯಕ್ಕೆ ಮುಂದಾಗುವುದೇ ನಿಜವಾದ ಮಾನವೀಯತೆ’ ಎಂದುಜಮಾತೆ ಇಸ್ಲಾಮಿ ಹಿಂದ್ನ ಜಿಲ್ಲಾ ಘಟಕದ ಸಂಚಾಲಕಮುಹಮ್ಮದ್ ಝಿಯಾಉಲ್ಲಾ ತಿಳಿಸಿದ್ದಾರೆ.