ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಲಬುರಗಿಯು ಬೆಳೆಯುತ್ತಿರುವ ನಗರವಾದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ಕಮಿಷನರ್ ಕಚೇರಿಯನ್ನು ಆರಂಭಿಸಲಾಗಿತ್ತು. ಆದರೆ, ಆ ಆಶಯ ಈಡೇರಲಿಲ್ಲ. ಪೊಲೀಸರೇ ಕಳ್ಳರು, ಸಮಾಜ ಘಾತುಕ ಶಕ್ತಿಗಳೊಂದಿಗೆ ಕೈಜೋಡಿಸಿದ್ದಾರೆ. ಈ ಬಗ್ಗೆ ದಾಖಲೆಗಳು ನನ್ನ ಬಳಿ ಇವೆ’ ಎಂದರು.