<p><strong>ಕಲಬುರಗಿ:</strong> ಜಿಲ್ಲೆಯಲ್ಲಿ ಒಂದೆಡೆ ಧಾರಾಕಾರ ಮಳೆ ಮತ್ತೊಂದೆಡೆ ಮಹಾರಾಷ್ಟ್ರದಿಂದ ಭೀಮಾನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು ಹಲವೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದೆ.</p><p>ಮಹಾರಾಷ್ಟ್ರದ ಉಜನಿ, ಸೀನಾ ಹಾಗೂ ವೀರ ಜಲಾಶಯದಿಂದ ಭೀಮಾನದಿ ಉಕ್ಕೇರಿ ಹರಿಯುತ್ತಿದ್ದು, ಜಿಲ್ಲೆಯ ಅಫಜಲಪುರ ಹಾಗೂ ಜೇವರ್ಗಿ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.</p><p>ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭೀಮಾನದಿ ತೀರದ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರಕ್ಕೆ ಭೇಟಿ ನೀಡಿ ಗಾಣಗಾಪುರ ಹಾಗೂ ಜೇವರ್ಗಿ ತಾಲ್ಲೂಕಿನ ಇಟಾಗಾ ನಡುವಣ ಸೇತುವೆ ಜಲಾವೃತಗೊಂಡಿರುವುದನ್ನು ವೀಕ್ಷಿಸಿದರು.</p><p>ತಾಲ್ಲೂಕಿನ ದೇವಲ್ ಗಾಣಗಾಪುರ ಗ್ರಾಮದ ಬಳಿ ತಾತ್ಕಾಲಿಕವಾಗಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಅಲ್ಲಿನ ನಿವಾಸಿಗಳೊಂದಿಗೆ ಮಾತನಾಡಿ ಸೌಲಭ್ಯ ಒದಗಿಸಿರುವುದರ ಕುರಿತು ಮಾಹಿತಿ ಪಡೆದರು.</p><p>ತಾಲ್ಲೂಕಿನ ಮಳೆಯಿಂದ ಹಾನಿಗೊಳಗಾದ ಬೆಳೆಗಳನ್ನು ಕೂಡಾ ಸಚಿವರ ಪರಿಶೀಲಿಸಿ ರೈತರೊಂದಿಗೆ ಮಾತನಾಡಿದರು</p><p>ಬಳಿಕ ಗ್ರಾಮದ ಹೊರವಲಯದಲ್ಲಿ ತೊಗರಿ ಸೇರಿದಂತೆ ಇತರೆ ಬೆಳೆ ಹಾನಿಗೀಡಾಗಿರುವುದನ್ನು ಪರಿಶೀಲಿಸಿದ ಸಚಿವರು</p><p>ಸ್ಥಳದಲ್ಲಿದ್ದ ಕೃಷಿ ಹಾಗೂ ಇತರೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಬೆಳೆ ಹಾನಿಯಾದ ಕುರಿತು ಸಮರ್ಪಕ ಹಾಗೂ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಜಿಲ್ಲೆಯಲ್ಲಿ ಒಂದೆಡೆ ಧಾರಾಕಾರ ಮಳೆ ಮತ್ತೊಂದೆಡೆ ಮಹಾರಾಷ್ಟ್ರದಿಂದ ಭೀಮಾನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು ಹಲವೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದೆ.</p><p>ಮಹಾರಾಷ್ಟ್ರದ ಉಜನಿ, ಸೀನಾ ಹಾಗೂ ವೀರ ಜಲಾಶಯದಿಂದ ಭೀಮಾನದಿ ಉಕ್ಕೇರಿ ಹರಿಯುತ್ತಿದ್ದು, ಜಿಲ್ಲೆಯ ಅಫಜಲಪುರ ಹಾಗೂ ಜೇವರ್ಗಿ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.</p><p>ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭೀಮಾನದಿ ತೀರದ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರಕ್ಕೆ ಭೇಟಿ ನೀಡಿ ಗಾಣಗಾಪುರ ಹಾಗೂ ಜೇವರ್ಗಿ ತಾಲ್ಲೂಕಿನ ಇಟಾಗಾ ನಡುವಣ ಸೇತುವೆ ಜಲಾವೃತಗೊಂಡಿರುವುದನ್ನು ವೀಕ್ಷಿಸಿದರು.</p><p>ತಾಲ್ಲೂಕಿನ ದೇವಲ್ ಗಾಣಗಾಪುರ ಗ್ರಾಮದ ಬಳಿ ತಾತ್ಕಾಲಿಕವಾಗಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಅಲ್ಲಿನ ನಿವಾಸಿಗಳೊಂದಿಗೆ ಮಾತನಾಡಿ ಸೌಲಭ್ಯ ಒದಗಿಸಿರುವುದರ ಕುರಿತು ಮಾಹಿತಿ ಪಡೆದರು.</p><p>ತಾಲ್ಲೂಕಿನ ಮಳೆಯಿಂದ ಹಾನಿಗೊಳಗಾದ ಬೆಳೆಗಳನ್ನು ಕೂಡಾ ಸಚಿವರ ಪರಿಶೀಲಿಸಿ ರೈತರೊಂದಿಗೆ ಮಾತನಾಡಿದರು</p><p>ಬಳಿಕ ಗ್ರಾಮದ ಹೊರವಲಯದಲ್ಲಿ ತೊಗರಿ ಸೇರಿದಂತೆ ಇತರೆ ಬೆಳೆ ಹಾನಿಗೀಡಾಗಿರುವುದನ್ನು ಪರಿಶೀಲಿಸಿದ ಸಚಿವರು</p><p>ಸ್ಥಳದಲ್ಲಿದ್ದ ಕೃಷಿ ಹಾಗೂ ಇತರೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಬೆಳೆ ಹಾನಿಯಾದ ಕುರಿತು ಸಮರ್ಪಕ ಹಾಗೂ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>