ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಅವರು, ‘ಮಲ್ಲಿಕಾರ್ಜುನ ಖರ್ಗೆ ಅವರು ವಿಷಕಾರಿ ಆಗಿದ್ದರಿಂದಲೇ ಕಲ್ಯಾಣ ಕರ್ನಾಟಕ ಭಾಗಕ್ಕೆ 371(ಜೆ), ಕೇಂದ್ರೀಯ ವಿಶ್ವವಿದ್ಯಾಲಯ, ಇಎಸ್ಐಸಿ ಆಸ್ಪತ್ರೆ,ವಿಮಾನ ನಿಲ್ದಾಣ, ವಿಮಾನ ನಿಲ್ದಾಣ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳು ಜಾರಿಯಾಗಿವೆ. ರೈಲ್ವೆ ಡಿವಿಜನ್, ಜವಳಿ ಪಾರ್ಕ್, ನೀರಾವರಿಯಂಥ ಪ್ರಮುಖ ಯೋಜನೆಗಳು ಜಿಲ್ಲೆಗೆ ಬಂದಿವೆ. ನೀವು ಕಣ್ಣೆತ್ತಿ ನೋಡಬೇಕು’ ಎಂದಿದ್ದಾರೆ.