ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ ಅವರಿಗೆ ಪತ್ರ ಬರೆದಿರುವ ಶಾಸಕರು ಕಳೆದ ವರ್ಷ ನೆರೆ ಪ್ರವಾಹದಿಂದ ರಾಜ್ಯದ ರೈತರು ತೀವ್ರ ನಷ್ಟ ಅನುಭವಿಸಿದ್ದರು. ಅಲ್ಲದೇ, ಕೊರೊನಾ ಲಾಕ್ಡೌನ್ನಿಂದಾಗಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ರೈತರಿಗೆ ಸೂಕ್ತ ಮಾರುಕಟ್ಟೆಯೂ ಲಭಿಸಿರಲಿಲ್ಲ. ಜೊತೆಗೆ ಬೆಲೆಯಲ್ಲಿ ತೀವ್ರ ಕುಸಿತ ಕಂಡಿದ್ದರಿಂದ ರೈತರು ತೀವ್ರ ಸಂಕಷ್ಟ ಅನುಭವಿಸಿದ್ದರು. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆ ಏರಿಕೆ ಮಾಡಿರುವುದು ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕಂಪನಿಗಳು ರಸಗೊಬ್ಬರ ದರ ಏರಿಕೆ ಮಾಡಿದ್ದರೂ ಹಳೆ ದರದಲ್ಲಿಯೇ ರಸಗೊಬ್ಬರ ಪೂರೈಸುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ತನ್ನ ಮಾತು ತಪ್ಪಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.