‘ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮೊದಲು ಬಿಜೆಪಿ ಪಕ್ಷ ಸ್ವರ್ಗವನ್ನೇ ಧರೆಗಿಳಿಸುವುದಾಗಿ ಜನಸಾಮಾನ್ಯರಿಗೆ ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದ ಮೇಲೆ ರಕ್ತ ಹೀರುವ ತಿಗಣೆಯಂತೆ ವರ್ತಿಸುತ್ತಿದೆ. ನೋಟು ಅಮಾನ್ಯೀಕರಣ, ಜಿಎಸ್ಟಿ ಮೇಲೆ ಹೆಚ್ಚುವರಿ ತೆರಿಗೆ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಅಡುಗೆ ಅನಿಲ ಬೆಲೆಯಲ್ಲಿ ಅಪಾರ ಏರಿಕೆ ಜೊತೆಗೆ ಈ ಮುಂಚೆ ನೀಡಲಾಗುತ್ತಿದ್ದ ಸಬ್ಸಿಡಿ ಕೂಡಾ ರದ್ದು ಮಾಡಿದೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.