ಕಲಬುರ್ಗಿ:'ಬೀಜ ವಿಧೇಯಕ 2019' ಹೆಸರಲ್ಲಿ ಬಿತ್ತನೆ ಬೀಜ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತರಲು ಹೊರಟಿರುವುದು ಖಂಡನೀಯ. ಈಗಾಗಲೇ ಬೆಳೆ ನಷ್ಟ, ಅತಿವೃಷ್ಟಿ–ಅನಾವೃಷ್ಟಿ, ಸರಿಯಾದ ಬೆಂಬಲ ಬೆಲೆ ಹಾಗೂ ಮಾರುಕಟ್ಟೆ ದೊರಕದೇ ತೀವ್ರ ಸಂಕಷ್ಟ ಅನುಭವಿಸುತ್ತಿರುವ ರೈತರಿಗೆ ಇದೊಂದು ಮಾರಕ ಕಾಯ್ದೆಯಾಗಿ ಪರಿಣಮಿಸಲಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.