ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಡೀನ್ ಡಾ.ವಿ.ಟಿ. ಕಾಂಬಳೆ ಮಾತನಾಡಿ, ‘ನಮ್ಮ ದೇಶವನ್ನು ಒಗ್ಗಟ್ಟಾಗಿ ಮುಂದುವರಿಸಲು ಇದಕ್ಕಿಂತ ಉತ್ತಮ ಮಾರ್ಗ ಬೇರೊಂದಿಲ್ಲ. ಅಂಬೇಡ್ಕರ್ ಅವರ ಚಿಂತನೆಗಳು, ವಿಚಾರಧಾರೆಗಳನ್ನು ಯುವ ಜನರಿಗೆ ಮುಟ್ಟಿಸುವ ದಿಸೆಯಲ್ಲಿ ಅವರು ಜೀವನ ಪ್ರಯೋಗ ಹೆಚ್ಚು ಪ್ರಭಾವಶಾಲಿ ಹಾಗೆ ಅಂಬೇಡ್ಕರ್ ಅವರುಜೀವಂತವಾಗಿಲ್ಲದಿದ್ದರೂ ಅವರ ವೈಚಾರಿಕ ಚಿಂತನೆಗಳು ಇನ್ನೂ ಜೀವಂತವಾಗಿವೆ ಎನ್ನುವದನ್ನು ಮರೆಯಬಾರದು’ ಎಂದರು.