ಕಲಬುರ್ಗಿ ಉತ್ತರ ಮತಕ್ಷೇತ್ರದಲ್ಲಿ ಹಲವರು ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ್ದರೂ ಮಂಜೂರಾಗಿಲ್ಲ. ಈ ಆಯ್ಕೆ ಸಮಿತಿಯ ಅಧ್ಯಕ್ಷರಾದ ಖನೀಜ್ ಫಾತಿಮಾ ಅವರೇ ಮುತುವರ್ಜಿ ವಹಿಸಿ ಸಾಲ ಮಂಜೂರು ಮಾಡಿಸಬೇಕು. ಕ್ಷೇತ್ರದಲ್ಲಿ ಡಾ.ಬಾಬು ಜಗಜೀವನರಾಮ್ ಸಮುದಾಯ ಭವನ, ಮಾದಿಗರ ಬಡಾವಣೆಯಲ್ಲಿ ಸಿಮೆಂಟ್ ರಸ್ತೆ, ಒಳಚರಂಡಿ ನಿರ್ಮಾಣ, ಕುರಿಯುವ ನೀರಿಗಾಗಿ ಪ್ರತ್ಯೇಕ ಬೋರ್ವೆಲ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದೂ ಕೋರಿದರು.