ಸ್ಥಳಕ್ಕೆ ಕಂದಾಯ ನಿರೀಕ್ಷಕ ಪ್ರಭುಲಿಂಗ ತಟ್ಟೆ, ಪಿಎಸ್ಐ ಸುರೇಶಕುಮಾರ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಿದರು. ರಾಜಕುಮಾರ ಮುಲಗೆ ಮಾತನಾಡಿ, ‘ಡೊಂಬರ ಸಮುದಾಯದವರು ಸ್ಮಶಾನಭೂಮಿಗಗಾಗಿ ಎರಡು ವರ್ಷಗಳಿಂದ ಆಗ್ರಹಿಸಲಾಗುತ್ತಿದೆ. ಆದರೆ ಸ್ಥಳೀಯ ಆಡಳಿತ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಬೇಡಿಕೆ ಈಡೇರುತ್ತಿಲ್ಲ. ಇಂತಹ ಸಣ್ಣ ಸಮುದಾಯವನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ’ ಎಂದು ಆಪಾದಿಸಿದರು.