ಅಲ್ಲದೇ, ಒಂದು ದೇಶ ಒಂದು ಚುನಾವಣೆ ಕುರಿತು ಅಧ್ಯಯನ ನಡೆಸಲು ರಚಿಸಲಾದ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರಾದ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಪತ್ರ ಬರೆದಿರುವ ಧುತ್ತರಗಿ, ‘ಲೋಕಸಭೆ ಹಾಗೂ ರಾಜ್ಯದ ವಿವಿಧ ವಿಧಾನಸಭೆಗಳು, ವಿಧಾನಪರಿಷತ್, ಪಂಚಾಯಿತಿ, ಸ್ಥಳೀಯ ಸಂಸ್ಥೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಬೇಡಿಕೆಯನ್ನು ಯಥಾವತ್ ಜಾರಿಗೊಳಿಸಬಾರದು. ಲೋಕಸಭೆ ಹಾಗೂ ರಾಜ್ಯಗಳ ವಿಧಾನಸಭೆ, ಪಂಚಾಯಿತಿ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ಬದಲು ಲೋಕಸಭೆ ಚುನಾವಣೆಯನ್ನು ಬೇರೆ ಸಮಯದಲ್ಲಿ ನಡೆಸಬೇಕು‘ ಎಂದು ಆಗ್ರಹಿಸಿದ್ದಾರೆ.