‘ದೇಶದಲ್ಲಿನ ಆರ್ಥಿಕತೆ, ನಿರುದ್ಯೋಗ, ರೈತರ ಕೂಲಿ ಕಾರ್ಮಿಕರ, ಸಂಸ್ಕೃತಿಯ, ಸಹೋದರತೆ ಹಾಗೂ ಭಾತೃತ್ವದ ಬಗ್ಗೆ ಮಾತನಾಡುವ ಕನ್ಹಯ್ಯಕುಮಾರ್ ದೇಶ ಒಡೆಯುವ, ದೇಶದ್ರೋಹದ ಬಗ್ಗೆ ಎಂದೂ ಮಾತನಾಡಿಲ್ಲ. ಮಾತನಾಡುವುದೂ ಇಲ್ಲ. ದೇಶದ ತುಂಬೆಲ್ಲ ಯುವಕರಲ್ಲಿ ಸ್ಫೂರ್ತಿಯನ್ನು ತುಂಬುತ್ತಿದ್ದಾರೆ. ಅಂತಹ ವ್ಯಕ್ತಿಯ ಭಾಷಣ ಕೇಳುವ ಅವಕಾಶವನ್ನು ರಾಜ್ಯ ಬಿಜೆಪಿ ಸರ್ಕಾರ ವಿದ್ಯಾರ್ಥಿಗಳಿಂದ ಕಿತ್ತುಕೊಂಡಿದೆ. ವಿ.ವಿ.ಯಲ್ಲಿ ನಿಷೇಧಾಜ್ಞೆ ವಿಧಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಭೀತಿಯ ವಾತಾವರಣವನ್ನು ಹುಟ್ಟುಹಾಕಿದ್ದಕ್ಕೆ ಕಾರಣವಾದ ಆರ್ಎಸ್ಎಸ್, ಶ್ರೀರಾಮಸೇನೆ, ಬಜರಂಗ ದಳ, ವಿಶ್ವ ಹಿಂದೂ ಪರಿಷತ್, ಎಬಿವಿಪಿ ಸಂಘಟನೆಳನ್ನು ನಿಷೇಧಿಸಬೇಕು’ ಎಂದು ಒತ್ತಾಯಿಸಿದರು.