<p><strong>ಕಲಬುರ್ಗಿ: </strong>ಇಲ್ಲಿನ ರಂಗಾಯಣದ ನಿರ್ದೇಶಕ ಮಹೇಶ ವಿ.ಪಾಟೀಲ ಅವರನ್ನು ವಜಾಗೊಳಿಸಬೇಕು ಎಂದು ಅಗ್ರಹಿಸಿ ರಂಗ ಕಲಾವಿದರ ಒಕ್ಕೂಟದ ಸದಸ್ಯರು ರಂಗಾಯಣ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಪಿ.ಎಂ.ಮಣ್ಣೂರ ಅವರು, ಇಲ್ಲಿನ ರಂಗಾಯಣ ನಿಷ್ಕ್ರಿಯಗೊಂಡಿದ್ದು, ಕಲಾವಿದರಿಗೆ ಪ್ರೋತ್ಸಾಹ ಸಿಗುತ್ತಿಲ್ಲ ಎಂದು ದೂರಿದರು.</p>.<p>ನಾಲ್ಕು ತಿಂಗಳ ಹಿಂದೆ ಬೆಂಗಳೂರು ರಂಗಸಮಾಜದವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಇಲ್ಲಿಗೆ ಬಂದು ಕಲಾವಿದರ ಅಭಿಪ್ರಾಯವನ್ನು ಸಂಗ್ರಹಿಸಿ ಸಂಬಂಧಪಟ್ಟ ಸಚಿವರಿಗೆ ಸಲ್ಲಿಸಿದ್ದಾರೆ. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.</p>.<p>ಜನರಂಗದ ಅಧ್ಯಕ್ಷ ಶಂಕರಯ್ಯ ಆರ್.ಘಂಟಿ ಮಾತನಾಡಿ, ಮೈಸೂರು, ಶಿವಮೊಗ್ಗ ಮತ್ತು ಧಾರವಾಡದ ರಂಗಾಯಣಗಳು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿವೆ. ಇಲ್ಲಿ ಯಾವುದೇ ರಂಗ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿಲ್ಲ ಎಂದರು.</p>.<p>ಮಹೇಶ ಪಾಟೀಲ ಅವರು ರಂಗಾಯಣದಲ್ಲಿ ದುರಾಡಳಿತ ನಡೆಸುತ್ತಿದ್ದಾರೆ. ಈ ಭಾಗದ ಹಿರಿಯ ಕಲಾವಿದರು, ರಂಗಾಸಕ್ತರು, ಸಾಹಿತಿಗಳ ಹೋರಾಟದ ಫಲವಾಗಿ ಇಲ್ಲಿ ರಂಗಾಯಣ ಸ್ಥಾಪನೆ ಆಗಿದೆ. ಆದರೆ, ಅದರಿಂದ ಪ್ರಯೋಜನ ಇಲ್ಲದಂತಾಗಿದೆ ಎಂದು ಹೇಳಿದರು.</p>.<p>ಸರ್ಕಾರದಿಂದ ಬಿಡುಗಡೆ ಆದ ಅನುದಾನ ಸಮರ್ಪಕವಾಗಿ ಬಳಕೆ ಆಗುತ್ತಿಲ್ಲ. ಕಲಾವಿದರಿಗೆ ಬೆಲೆ ಇಲ್ಲದಂತಾಗಿದೆ. ಮೈಸೂರಿನಲ್ಲಿ ರಾಷ್ಟ್ರಮಟ್ಟದ ಕಲಾವಿದರನ್ನು ಕರೆಸಿ ರಂಗೋತ್ಸವ ನಡೆಸಲಾಗುತ್ತದೆ. ಮಹೇಶ ಪಾಟೀಲ ಅವರು ಅಧಿಕಾರ ವಹಿಸಿಕೊಂಡ ನಂತರ ಅಂಥಹ ಯಾವುದೇ ಕಾರ್ಯಕ್ರಗಳು ಇಲ್ಲಿ ನಡೆದಿಲ್ಲ ಎಂದರು.</p>.<p>ಈ ಬಗ್ಗೆ ಡಿಸೆಂಬರ್ 30ರ ಒಳಗೆ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರು, ಕನ್ನಡ ಮತ್ತು ಸಂಸ್ಕೃತಿ ಸಚಿವರ ನಿವಾಸದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಇದಕ್ಕೂ ಮುನ್ನ ಒಕ್ಕೂಟದ ಸದಸ್ಯರು ಖರ್ಗೆ ಪೆಟ್ರೋಲ್ ಪಂಪ್ನಿಂದ ರಂಗಾಯಣದವರೆಗೆ ಮೆರವಣಿಗೆ ನಡೆಸಿದರು.</p>.<p>ಕಲಬುರ್ಗಿ ಆರ್ಟ್ ಥಿಯೇಟರ್ನ ಸುನಿಲ ಮಾನಪಡೆ, ವಿ.ಎನ್.ಅಕ್ಕಿ, ವಿಜಯ ಹಾಗರಗುಂಡಗಿ, ಅಶೋಕ ಚಿತ್ತಕೋಟಿ, ಲಕ್ಷ್ಮಣ ಮಂಡಲಗೇರಾ, ಮಲ್ಲಿಕಾರ್ಜುನ ದೊಡ್ಡಮನಿ ರಾಜಕುಮಾರ ಎಸ್.ಕೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಇಲ್ಲಿನ ರಂಗಾಯಣದ ನಿರ್ದೇಶಕ ಮಹೇಶ ವಿ.ಪಾಟೀಲ ಅವರನ್ನು ವಜಾಗೊಳಿಸಬೇಕು ಎಂದು ಅಗ್ರಹಿಸಿ ರಂಗ ಕಲಾವಿದರ ಒಕ್ಕೂಟದ ಸದಸ್ಯರು ರಂಗಾಯಣ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಪಿ.ಎಂ.ಮಣ್ಣೂರ ಅವರು, ಇಲ್ಲಿನ ರಂಗಾಯಣ ನಿಷ್ಕ್ರಿಯಗೊಂಡಿದ್ದು, ಕಲಾವಿದರಿಗೆ ಪ್ರೋತ್ಸಾಹ ಸಿಗುತ್ತಿಲ್ಲ ಎಂದು ದೂರಿದರು.</p>.<p>ನಾಲ್ಕು ತಿಂಗಳ ಹಿಂದೆ ಬೆಂಗಳೂರು ರಂಗಸಮಾಜದವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಇಲ್ಲಿಗೆ ಬಂದು ಕಲಾವಿದರ ಅಭಿಪ್ರಾಯವನ್ನು ಸಂಗ್ರಹಿಸಿ ಸಂಬಂಧಪಟ್ಟ ಸಚಿವರಿಗೆ ಸಲ್ಲಿಸಿದ್ದಾರೆ. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.</p>.<p>ಜನರಂಗದ ಅಧ್ಯಕ್ಷ ಶಂಕರಯ್ಯ ಆರ್.ಘಂಟಿ ಮಾತನಾಡಿ, ಮೈಸೂರು, ಶಿವಮೊಗ್ಗ ಮತ್ತು ಧಾರವಾಡದ ರಂಗಾಯಣಗಳು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿವೆ. ಇಲ್ಲಿ ಯಾವುದೇ ರಂಗ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿಲ್ಲ ಎಂದರು.</p>.<p>ಮಹೇಶ ಪಾಟೀಲ ಅವರು ರಂಗಾಯಣದಲ್ಲಿ ದುರಾಡಳಿತ ನಡೆಸುತ್ತಿದ್ದಾರೆ. ಈ ಭಾಗದ ಹಿರಿಯ ಕಲಾವಿದರು, ರಂಗಾಸಕ್ತರು, ಸಾಹಿತಿಗಳ ಹೋರಾಟದ ಫಲವಾಗಿ ಇಲ್ಲಿ ರಂಗಾಯಣ ಸ್ಥಾಪನೆ ಆಗಿದೆ. ಆದರೆ, ಅದರಿಂದ ಪ್ರಯೋಜನ ಇಲ್ಲದಂತಾಗಿದೆ ಎಂದು ಹೇಳಿದರು.</p>.<p>ಸರ್ಕಾರದಿಂದ ಬಿಡುಗಡೆ ಆದ ಅನುದಾನ ಸಮರ್ಪಕವಾಗಿ ಬಳಕೆ ಆಗುತ್ತಿಲ್ಲ. ಕಲಾವಿದರಿಗೆ ಬೆಲೆ ಇಲ್ಲದಂತಾಗಿದೆ. ಮೈಸೂರಿನಲ್ಲಿ ರಾಷ್ಟ್ರಮಟ್ಟದ ಕಲಾವಿದರನ್ನು ಕರೆಸಿ ರಂಗೋತ್ಸವ ನಡೆಸಲಾಗುತ್ತದೆ. ಮಹೇಶ ಪಾಟೀಲ ಅವರು ಅಧಿಕಾರ ವಹಿಸಿಕೊಂಡ ನಂತರ ಅಂಥಹ ಯಾವುದೇ ಕಾರ್ಯಕ್ರಗಳು ಇಲ್ಲಿ ನಡೆದಿಲ್ಲ ಎಂದರು.</p>.<p>ಈ ಬಗ್ಗೆ ಡಿಸೆಂಬರ್ 30ರ ಒಳಗೆ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರು, ಕನ್ನಡ ಮತ್ತು ಸಂಸ್ಕೃತಿ ಸಚಿವರ ನಿವಾಸದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಇದಕ್ಕೂ ಮುನ್ನ ಒಕ್ಕೂಟದ ಸದಸ್ಯರು ಖರ್ಗೆ ಪೆಟ್ರೋಲ್ ಪಂಪ್ನಿಂದ ರಂಗಾಯಣದವರೆಗೆ ಮೆರವಣಿಗೆ ನಡೆಸಿದರು.</p>.<p>ಕಲಬುರ್ಗಿ ಆರ್ಟ್ ಥಿಯೇಟರ್ನ ಸುನಿಲ ಮಾನಪಡೆ, ವಿ.ಎನ್.ಅಕ್ಕಿ, ವಿಜಯ ಹಾಗರಗುಂಡಗಿ, ಅಶೋಕ ಚಿತ್ತಕೋಟಿ, ಲಕ್ಷ್ಮಣ ಮಂಡಲಗೇರಾ, ಮಲ್ಲಿಕಾರ್ಜುನ ದೊಡ್ಡಮನಿ ರಾಜಕುಮಾರ ಎಸ್.ಕೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>