‘ಗ್ರಾಮ ಪಂಚಾಯಿತಿ ಚುನಾವಣೆಯ ನೀತಿ ಸಂಹಿತೆ ಉಲ್ಲಂಘಿಸಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮನೆಯಲ್ಲಿ ರಾತ್ರಿ ಮಾಂಸದೂಟದ ವ್ಯವಸ್ಥೆ ಮಾಡಲಾಗಿದ್ದು, ನೂರಾರು ಜನರನ್ನು ಸೇರಿಸಿ ಹಣ ಹಂಚುವ ಯತ್ನ ನಡೆದಿದೆ ಎಂದು ಗ್ರಾಮದ ಕೆಲವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಗ ಪೊಲೀಸ್ ಅಧಿಕಾರಿಗಳು ಅಲ್ಲಿಗೆ ತೆರಳಿ ಜನರನ್ನು ಚದುರಿಸಿದ್ದಾರೆ. ಈ ಅಕ್ರಮ ಮರೆಮಾಚಲು ಬಿ.ಆರ್. ಪಾಟೀಲ ಅವರು ಇಂತಹ ಆರೋಪ ಮಾಡುತ್ತಿದ್ದಾರೆ’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಹರ್ಷಾನಂದ ಗುತ್ತೇದಾರ ಪ್ರತ್ಯಾರೋಪ ಮಾಡಿದ್ದಾರೆ.