ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಸುಧಾಮ ಧನ್ನಿ ಮಾತನಾಡಿ, ಕೋವಿಡ್ ಸಂಕಷ್ಟ ಕಾಲದಲ್ಲೂ ಪರಿಶಿಷ್ಟರ ಮೇಲೆ ದೌರ್ಜನ್ಯ ಮುಂದುವರಿದಿದೆ. ಪರಿಶಿಷ್ಟ ಸಮಾಜದವರಿಗೆ ವಾಸಿಸಲು ಮನೆಗಳಿಲ್ಲ, ಮೃತಪಟ್ಟರೆ ಅಂತ್ಯ ಸಂಸ್ಕಾರ ಮಾಡಲು ಸ್ಮಶಾನಗಳಿಲ್ಲ. ಮೊದಲೇ ಬಡತನ, ನಿರುದ್ಯೋಗದಿಂದ ಬಳಲುತ್ತಿದ್ದ ಪರಿಶಿಷ್ಟರು ಕೋವಿಡ್ನಿಂದ ಜೀವ ಮತ್ತು ಜೀವನ ಎರಡನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.