ಜಗತ್ ವೃತ್ತದಿಂದ ಮೆರವಣಿಗೆ ಮೂಲಕ ಹೊರಟು ಸರ್ದಾರ ವಲ್ಲಭಬಾಯಿ ಪಟೇಲ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೆರಳಿ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಪತ್ರ ಸಲ್ಲಿಸಲಾಗುವದು. ಪಕ್ಷದ ಎಲ್ಲ ಜನಪ್ರತಿನಿಧಿಗಳು, ಎಲ್ಲ ಸದಸ್ಯರು ಭಾಗವಹಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.