<p><strong>ಕಲಬುರ್ಗಿ:</strong> ’ಹೊಸ ಶಿಕ್ಷಣ ನೀತಿಯನ್ನು ವಿರೋಧಿಸಿ ಅಖಿಲ ಭಾರತ ವಿಶ್ವವಿದ್ಯಾಲಯಗಳ ಶಿಕ್ಷಕೇತರ ನೌಕರರ ಕಾನ್ಫಡರೇಷನ್ ವತಿಯಿಂದ ಸೆ. 30ರಂದು ದೇಶದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಜಿಲ್ಲೆಯಲ್ಲೂ ಪ್ರತಿಭಟನಾ ಪ್ರದರ್ಶನ ಮಾಡಲಾಗುವುದು‘ ಎಂದು ಕಾನ್ಫಡರೇಷನ್ ಮಹಾಕಾರ್ಯದರ್ಶಿ ಎಂ.ಬಿ.ಸಜ್ಜನ ತಿಳಿಸಿದರು.</p>.<p>’ದೇಶದ ಎಲ್ಲ ವಿಶ್ವವಿದ್ಯಾಲಯಗಳ ಶಿಕ್ಷಕೇತರ ನೌಕರರು ಹೊಸ ಶಿಕ್ಷಣ ನೀತಿಗೆ ವಿರೋಧಿಸಿದ್ದು, ಅಂದು ಆಯಾ ವಿಶ್ವವಿದ್ಯಾಲಯಗಳಲ್ಲಿ 2 ತಾಸಿನ ಮುಷ್ಕರ ನಡೆಸಿ ಈ ಶಿಕ್ಷಣ ನೀತಿಯನ್ನು ತಡೆ ಹಿಡಿಯುವಂತೆ ಕೋರಿ ಕುಲಪತಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು‘ ಎಂದು ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಶಿಕ್ಷಣ ಗುಣಮಟ್ಟ ಕುಸಿಯಲಿದೆ. ಶಿಕ್ಷಣದ ಸೌಲಭ್ಯ ಮತ್ತು ಅವಕಾಶಗಳು ಹಾಗೂ ಪ್ರವೇಶಗಳಲ್ಲಿ ತಾರತಮ್ಯಗಳು ಹೆಚ್ಚಾಗಲಿವೆ. ಶಿಕ್ಷಣವು ಸಹವರ್ತಿ ಪಟ್ಟಿಯಲ್ಲಿದ್ದರೂ ರಾಜ್ಯ ಸರ್ಕಾರಗಳನ್ನು ಕಡೆಗಣಿಸಿ ಅವುಗಳ ಹಕ್ಕುಗಳನ್ನು ಮೊಟಕುಗೊಳಿಸಲಿದೆ‘ ಎಂದು ದೂರಿದರು.</p>.<p>’ಈ ಹೊಸ ನೀತಿಯು ಶಿಕ್ಷಣದಲ್ಲಿ ಖಾಸಗೀಕರಣ, ವ್ಯಾಪಾರೀಕರಣಕ್ಕೆ ಹೆಚ್ಚು ಅವಕಾಶ ನೀಡುತ್ತದೆ. ಸಾರ್ವಜನಿಕ ಶಿಕ್ಷಣವನ್ನು ನಿರ್ನಾಮ ಮಾಡುವ ದುರುದ್ದೇಶ ಇದರಲ್ಲಿದೆ. ಇಡೀ ಶಿಕ್ಷಣ ವ್ಯವಸ್ಥೆಯ ಕೇಂದ್ರೀಕರಣ ಮಾಡಿ, ಅದರಲ್ಲಿ ಕೋಮುವಾದ ಬೆರೆಸುವ ಉದ್ದೇಶ ಇದರ ಹಿಂದಿದೆ‘ ಎಂದು ದೂರಿದರು.</p>.<p>ಮುಖಂಡ ಕೆ.ಜಿ ಕಿಣ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ’ಹೊಸ ಶಿಕ್ಷಣ ನೀತಿಯನ್ನು ವಿರೋಧಿಸಿ ಅಖಿಲ ಭಾರತ ವಿಶ್ವವಿದ್ಯಾಲಯಗಳ ಶಿಕ್ಷಕೇತರ ನೌಕರರ ಕಾನ್ಫಡರೇಷನ್ ವತಿಯಿಂದ ಸೆ. 30ರಂದು ದೇಶದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಜಿಲ್ಲೆಯಲ್ಲೂ ಪ್ರತಿಭಟನಾ ಪ್ರದರ್ಶನ ಮಾಡಲಾಗುವುದು‘ ಎಂದು ಕಾನ್ಫಡರೇಷನ್ ಮಹಾಕಾರ್ಯದರ್ಶಿ ಎಂ.ಬಿ.ಸಜ್ಜನ ತಿಳಿಸಿದರು.</p>.<p>’ದೇಶದ ಎಲ್ಲ ವಿಶ್ವವಿದ್ಯಾಲಯಗಳ ಶಿಕ್ಷಕೇತರ ನೌಕರರು ಹೊಸ ಶಿಕ್ಷಣ ನೀತಿಗೆ ವಿರೋಧಿಸಿದ್ದು, ಅಂದು ಆಯಾ ವಿಶ್ವವಿದ್ಯಾಲಯಗಳಲ್ಲಿ 2 ತಾಸಿನ ಮುಷ್ಕರ ನಡೆಸಿ ಈ ಶಿಕ್ಷಣ ನೀತಿಯನ್ನು ತಡೆ ಹಿಡಿಯುವಂತೆ ಕೋರಿ ಕುಲಪತಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು‘ ಎಂದು ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಶಿಕ್ಷಣ ಗುಣಮಟ್ಟ ಕುಸಿಯಲಿದೆ. ಶಿಕ್ಷಣದ ಸೌಲಭ್ಯ ಮತ್ತು ಅವಕಾಶಗಳು ಹಾಗೂ ಪ್ರವೇಶಗಳಲ್ಲಿ ತಾರತಮ್ಯಗಳು ಹೆಚ್ಚಾಗಲಿವೆ. ಶಿಕ್ಷಣವು ಸಹವರ್ತಿ ಪಟ್ಟಿಯಲ್ಲಿದ್ದರೂ ರಾಜ್ಯ ಸರ್ಕಾರಗಳನ್ನು ಕಡೆಗಣಿಸಿ ಅವುಗಳ ಹಕ್ಕುಗಳನ್ನು ಮೊಟಕುಗೊಳಿಸಲಿದೆ‘ ಎಂದು ದೂರಿದರು.</p>.<p>’ಈ ಹೊಸ ನೀತಿಯು ಶಿಕ್ಷಣದಲ್ಲಿ ಖಾಸಗೀಕರಣ, ವ್ಯಾಪಾರೀಕರಣಕ್ಕೆ ಹೆಚ್ಚು ಅವಕಾಶ ನೀಡುತ್ತದೆ. ಸಾರ್ವಜನಿಕ ಶಿಕ್ಷಣವನ್ನು ನಿರ್ನಾಮ ಮಾಡುವ ದುರುದ್ದೇಶ ಇದರಲ್ಲಿದೆ. ಇಡೀ ಶಿಕ್ಷಣ ವ್ಯವಸ್ಥೆಯ ಕೇಂದ್ರೀಕರಣ ಮಾಡಿ, ಅದರಲ್ಲಿ ಕೋಮುವಾದ ಬೆರೆಸುವ ಉದ್ದೇಶ ಇದರ ಹಿಂದಿದೆ‘ ಎಂದು ದೂರಿದರು.</p>.<p>ಮುಖಂಡ ಕೆ.ಜಿ ಕಿಣ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>