ನಗರದಲ್ಲಿ ಶನಿವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಮುಖಂಡ ಮೌಲಾ ಮುಲ್ಲಾ, ಭೀಮಾಶಂಕರ ಮಾಡಿಯಾಳ ಮತ್ತು ಶರಣಬಸಪ್ಪ ಮಮಶೆಟ್ಟಿ, ‘ಅನ್ಯಾಯಕ್ಕೆ ಒಳಗಾದವರನ್ನು ಬಿಟ್ಟು ದೌರ್ಜನ್ಯ ನಡೆಸಿದವರಿಂದ ದೂರು ಪಡೆದುಕೊಂಡಿದ್ದಾರೆ. ಪೊಲೀಸರ ಈ ಕ್ರಮ ಖಂಡಿಸಿ ನ.13ರಂದು ಇಲ್ಲಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು’ ಎಂದರು.