<p><strong>ಕಲಬುರ್ಗಿ: </strong>ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಜೈನಾಪುರ ಗ್ರಾಮದಲ್ಲಿ ಚುನಾವಣೆ ವೈಷಮ್ಯಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಜೈಲಿಗೆ ಹಾಕುವ ಮೂಲಕ ಆ ಮಹಿಳೆಯ ಜೊತೆಯಿದ್ದ ಮೂರು ವರ್ಷದ ಮಗುವಿನ ಸಾವಿಗೆ ಕಾರಣರಾದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಗುವಿನ ಸಂಬಂಧಿಗಳು ಇಲ್ಲಿನ ಜಿಮ್ಸ್ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>ಪ್ರತಿಭಟನೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ, ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಭಾಗವಹಿಸಿದ್ದು, ಪರಿಸ್ಥಿತಿ ಬಿಗುವಿನಿಂದ ಕೂಡಿದೆ.</p>.<p><strong>ಘಟನೆ ವಿವರ: </strong>ಜೇವರ್ಗಿ ತಾಲ್ಲೂಕಿನ ಅಂದೋಲಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಜೈನಾಪುರದಲ್ಲಿ ಇತ್ತೀಚೆಗೆ ಚುನಾವಣೆ ವಿಜಯೋತ್ಸವ ನಡೆದಿತ್ತು. ವಿಜೇತ ಅಭ್ಯರ್ಥಿ ರಾಜು ಬೆಂಬಲಿಗರು ಪರಾಜಿತ ಅಭ್ಯರ್ಥಿ ಸಂತೋಷ ಅವರ ಮನೆ ಮುಂದೆ ಪಟಾಕಿ ಹಾರಿಸಿದ್ದರು.</p>.<p>ಹೊರಗೆ ಬಂದ ಸಂತೋಷ ಅವರ ತಮ್ಮ ರವಿ ಹಾಗೂ ಅವರ ಪತ್ನಿ ಸಂಗೀತಾ ಇದನ್ನು ಪ್ರಶ್ನಿಸಿದರು. ಬಿಜೆಪಿ ಬೆಂಬಲಿತ ವಿಜೇತ ಅಭ್ಯರ್ಥಿ ರಾಜು ಅವರು ಸಂತೋಷ, ಸಂಗೀತಾ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದರು.</p>.<p>ಸ್ಥಳಕ್ಕೆ ಬಂದ ಪೊಲೀಸರು ಸಂಗೀತಾ ಅವರನ್ನು ಥಳಿಸಿದ್ದರು ಎನ್ನಲಾಗಿದೆ. ನಂತರ ಜೈಲಿಗೆ ಕರೆದೊಯ್ಯಲಾಗಿತ್ತು. ಮಗುವನ್ನೂ ಸಂಗೀತಾ ಕರೆದೊಯ್ದಿದ್ದರು. ಆ ಸಂದರ್ಭದಲ್ಲಿ ಆರೋಗ್ಯದಲ್ಲಿ ಏರುಪೇರಾಗಿ ಸಾವಿಗೀಡಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ.</p>.<p>ಸಂತೋಷ ಕಡೆಯವರು ದೂರು ದಾಖಲಿಸಿದ್ದರೂ ಜೇವರ್ಗಿ ಪಿಎಸ್ಐ ಮಂಜುನಾಥ ಹೂಗಾರ ಯಾವುದೇ ಕ್ರಮ ಕೈಗೊಂಡಿಲ್ಲ. ಬಿಜೆಪಿ ಮಾಜಿ ಶಾಸಕರೊಬ್ಬರ ಕುಮ್ಮಕ್ಕಿನ ಮೇಲೆ ಪಿಎಸ್ಐ ಸಂತೋಷ ಹಾಗೂ ಸಂಗೀತಾರನ್ನು ಥಳಿಸುವ ಮೂಲಕ ಅವರ ಮಗು ಭಾರತಿ ಸಾವಿಗೆ ಕಾರಣರಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಜೈನಾಪುರ ಗ್ರಾಮದಲ್ಲಿ ಚುನಾವಣೆ ವೈಷಮ್ಯಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಜೈಲಿಗೆ ಹಾಕುವ ಮೂಲಕ ಆ ಮಹಿಳೆಯ ಜೊತೆಯಿದ್ದ ಮೂರು ವರ್ಷದ ಮಗುವಿನ ಸಾವಿಗೆ ಕಾರಣರಾದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಗುವಿನ ಸಂಬಂಧಿಗಳು ಇಲ್ಲಿನ ಜಿಮ್ಸ್ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>ಪ್ರತಿಭಟನೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ, ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಭಾಗವಹಿಸಿದ್ದು, ಪರಿಸ್ಥಿತಿ ಬಿಗುವಿನಿಂದ ಕೂಡಿದೆ.</p>.<p><strong>ಘಟನೆ ವಿವರ: </strong>ಜೇವರ್ಗಿ ತಾಲ್ಲೂಕಿನ ಅಂದೋಲಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಜೈನಾಪುರದಲ್ಲಿ ಇತ್ತೀಚೆಗೆ ಚುನಾವಣೆ ವಿಜಯೋತ್ಸವ ನಡೆದಿತ್ತು. ವಿಜೇತ ಅಭ್ಯರ್ಥಿ ರಾಜು ಬೆಂಬಲಿಗರು ಪರಾಜಿತ ಅಭ್ಯರ್ಥಿ ಸಂತೋಷ ಅವರ ಮನೆ ಮುಂದೆ ಪಟಾಕಿ ಹಾರಿಸಿದ್ದರು.</p>.<p>ಹೊರಗೆ ಬಂದ ಸಂತೋಷ ಅವರ ತಮ್ಮ ರವಿ ಹಾಗೂ ಅವರ ಪತ್ನಿ ಸಂಗೀತಾ ಇದನ್ನು ಪ್ರಶ್ನಿಸಿದರು. ಬಿಜೆಪಿ ಬೆಂಬಲಿತ ವಿಜೇತ ಅಭ್ಯರ್ಥಿ ರಾಜು ಅವರು ಸಂತೋಷ, ಸಂಗೀತಾ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದರು.</p>.<p>ಸ್ಥಳಕ್ಕೆ ಬಂದ ಪೊಲೀಸರು ಸಂಗೀತಾ ಅವರನ್ನು ಥಳಿಸಿದ್ದರು ಎನ್ನಲಾಗಿದೆ. ನಂತರ ಜೈಲಿಗೆ ಕರೆದೊಯ್ಯಲಾಗಿತ್ತು. ಮಗುವನ್ನೂ ಸಂಗೀತಾ ಕರೆದೊಯ್ದಿದ್ದರು. ಆ ಸಂದರ್ಭದಲ್ಲಿ ಆರೋಗ್ಯದಲ್ಲಿ ಏರುಪೇರಾಗಿ ಸಾವಿಗೀಡಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ.</p>.<p>ಸಂತೋಷ ಕಡೆಯವರು ದೂರು ದಾಖಲಿಸಿದ್ದರೂ ಜೇವರ್ಗಿ ಪಿಎಸ್ಐ ಮಂಜುನಾಥ ಹೂಗಾರ ಯಾವುದೇ ಕ್ರಮ ಕೈಗೊಂಡಿಲ್ಲ. ಬಿಜೆಪಿ ಮಾಜಿ ಶಾಸಕರೊಬ್ಬರ ಕುಮ್ಮಕ್ಕಿನ ಮೇಲೆ ಪಿಎಸ್ಐ ಸಂತೋಷ ಹಾಗೂ ಸಂಗೀತಾರನ್ನು ಥಳಿಸುವ ಮೂಲಕ ಅವರ ಮಗು ಭಾರತಿ ಸಾವಿಗೆ ಕಾರಣರಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>