ಬೆಂಗಳೂರು: ‘ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅನುಷ್ಠಾನಗೊಳಿಸಿರುವ ಎಲ್ಲರಿಗೂ ಸೂರು ಯೋಜನೆಯ 3ನೇ ಹಂತದ ಕಾಮಗಾರಿ ಗುತ್ತಿಗೆ ಹಂಚಿಕೆ ವೇಳೆ ₹800 ಕೋಟಿ ಭ್ರಷ್ಟಾಚಾರ ನಡೆದಿದೆ’ ಎಂದು ಬಿಜೆಪಿಯ ಎನ್.ಆರ್.ರಮೇಶ್ ಆರೋಪಿಸಿದರು.
‘ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿನ 338 ಕೊಳೆಗೇರಿ ಪ್ರದೇಶಗಳಲ್ಲಿ ₹2,661 ಕೋಟಿ ವೆಚ್ಚದಲ್ಲಿ 49,368 ಮನೆಗಳನ್ನು ನಿರ್ಮಿಸಲು 17 ಕಂಪನಿಗಳಿಗೆ ಕಾನೂನುಬಾಹಿರವಾಗಿ ಕಾರ್ಯಾದೇಶ ಪತ್ರ ನೀಡಲಾಗಿದೆ’ ಎಂದು ರಮೇಶ್ ದೂರಿದರು.
‘ಅಮ್ಮ ಕನ್ಸ್ಟ್ರಕ್ಷನ್ ಇಂಡಿಯಾ ಕಂಪನಿಯು ತ್ರಿಪುರಾದಲ್ಲಿ ಕಾಮಗಾರಿ ಪೂರ್ಣಗೊಳಿಸಿರುವ ಪ್ರಮಾಣಪತ್ರ ನೀಡಿ ಗುತ್ತಿಗೆ ಪಡೆದಿದೆ. ಆದರೆ, ಅಲ್ಲಿ ಈ ಕಂಪನಿಗೆ ಯಾವುದೇ ಕಾಮಗಾರಿಯ ಗುತ್ತಿಗೆ ನೀಡಿಲ್ಲ ಎಂದು ಅಲ್ಲಿನ ಸಂಸ್ಥೆಗಳು ಸ್ಪಷ್ಟಪಡಿಸಿವೆ. ಅವ್ಯವಹಾರ ನಡೆದಿರುವುದಕ್ಕೆ ಇದು ಸಾಕ್ಷಿ’ ಎಂದರು.
‘ರಮೇಶ್ಗೆ ಆರೋಪ ಮಾಡುವುದು ಬಿಟ್ಟು ಬೇರೆ ಕೆಲಸ ಇಲ್ಲ’ ಎಂದು ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ವಿ. ದೇವರಾಜ್ ಹೇಳಿದರು.