<p><strong>ಕಲಬುರ್ಗಿ: </strong>‘ರಾಜ್ಯ ಸರ್ಕಾರ ಉರ್ದು ಅಕಾಡೆಮಿ ಬಗ್ಗೆ ನಿರ್ಲಕ್ಷ್ಯ ತೋರಿತ್ತಿದೆ. ಇದೂವರೆಗೂ ಅಧ್ಯಕ್ಷರನ್ನು ನೇಮಕ ಮಾಡದ ಕಾರಣ ಕಾರ್ಯಚಟುವಟಿಕೆಗಳಿಗೆ ತೀವ್ರ ಹಿನ್ನಡೆ ಆಗಿದೆ’ ಎಂದುಹೈದರಾಬಾದ್ ಕರ್ನಾಟಕ ಸೋಷಿಯಲ್ ಜಾಗೃತಿ ಫೋರಂ ಅಧ್ಯಕ್ಷ ಸಾಜಿದ್ಅಲಿ ರಂಜೋಳ್ವಿ ಅಸಮಧಾನ ವ್ಯಕ್ತಪಡಿಸಿದರು.</p>.<p>‘ರಾಜ್ಯ ಎಲ್ಲ ಅಕಾಡೆಮಿಗಳಿಗೆ ಅಧ್ಯಕ್ಷ, ಸದಸ್ಯರನ್ನು ನೇಮಕ ಮಾಡಿ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಲಾಗಿದೆ. ಆದರೆ, ಉರ್ದು ಅಕಾಡೆಮಿಯನ್ನು ಮಾತ್ರ ನಿರ್ಲಕ್ಷ್ಯ ಮಾಡಲಾಗಿದೆ.ಕೂಡಲೇ ನೂತನ ಅಧ್ಯಕ್ಷರನ್ನು ಹಾಗೂ ಸದಸ್ಯರನ್ನು ನೇಮಕ ಮಾಡುವ ಪ್ರಕ್ರಿಯೆ ಮುಗಿಸಬೇಕು’ ಎಂದು ಅವರು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ಈ ಕುರಿತು ಹಲವು ಸಲ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಅಲ್ಲದೇ ಈಚೆಗೆ ನಗರಕ್ಕೆ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಖುದ್ದು ಮನವಿ ಸಲ್ಲಿಸಿದ್ದೇವೆ. ಹೋರಾಟ ನಡೆಸಿದ್ದೇವೆ. ಆದರೂ ನಮ್ಮ ಬೇಡಿಕೆ ಈಡೇರಿಸಿಲ್ಲ’ ಎಂದು ದೂರಿದರು.</p>.<p>‘ಉರ್ದು ಭಾಷೆ ತನ್ನದೇ ಆದ ಸಾಂಸ್ಕೃತಿಕ, ಸಾಹಿತ್ಯಕ ಸೊಗಡು ಹೊಂದಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಎರಡನೇ ಭಾಷೆಯಾಗಿ ಜನರು ಉರ್ದು ಬಳುತ್ತಿದ್ದಾರೆ. ಹೀಗಿರುವಾಗ ಏಕೆ ಆದ್ಯತೆ ನೀಡುತ್ತಿಲ್ಲ’ ಎಂದೂ ಪ್ರಶ್ನಿಸಿದರು.</p>.<p>ಫೋರಂ ಪದಾಧಿಕಾರಿಗಳಾದ ಅಹ್ಮದ ಜಾವೀದ್, ಫೈಮುದ್ದೀನ್ ಫಿರಜಾದ, ಸೈಯದ್ ತೌಸೀಪ್ ದೇಸಾಯಿ, ಡಾ.ಮಾಜಿದ್ ಡಾಗಿ, ಡಾ.ಚಂದಹುಸೇನ ಅಕ್ಬರ್, ಸಿರಾಜ್ ತಿರಂದಾಜ್, ವಹಿದ್ ಅಂಜುಮ್, ಶಕೀಲ್ ಸರಡಗಿಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>‘ರಾಜ್ಯ ಸರ್ಕಾರ ಉರ್ದು ಅಕಾಡೆಮಿ ಬಗ್ಗೆ ನಿರ್ಲಕ್ಷ್ಯ ತೋರಿತ್ತಿದೆ. ಇದೂವರೆಗೂ ಅಧ್ಯಕ್ಷರನ್ನು ನೇಮಕ ಮಾಡದ ಕಾರಣ ಕಾರ್ಯಚಟುವಟಿಕೆಗಳಿಗೆ ತೀವ್ರ ಹಿನ್ನಡೆ ಆಗಿದೆ’ ಎಂದುಹೈದರಾಬಾದ್ ಕರ್ನಾಟಕ ಸೋಷಿಯಲ್ ಜಾಗೃತಿ ಫೋರಂ ಅಧ್ಯಕ್ಷ ಸಾಜಿದ್ಅಲಿ ರಂಜೋಳ್ವಿ ಅಸಮಧಾನ ವ್ಯಕ್ತಪಡಿಸಿದರು.</p>.<p>‘ರಾಜ್ಯ ಎಲ್ಲ ಅಕಾಡೆಮಿಗಳಿಗೆ ಅಧ್ಯಕ್ಷ, ಸದಸ್ಯರನ್ನು ನೇಮಕ ಮಾಡಿ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಲಾಗಿದೆ. ಆದರೆ, ಉರ್ದು ಅಕಾಡೆಮಿಯನ್ನು ಮಾತ್ರ ನಿರ್ಲಕ್ಷ್ಯ ಮಾಡಲಾಗಿದೆ.ಕೂಡಲೇ ನೂತನ ಅಧ್ಯಕ್ಷರನ್ನು ಹಾಗೂ ಸದಸ್ಯರನ್ನು ನೇಮಕ ಮಾಡುವ ಪ್ರಕ್ರಿಯೆ ಮುಗಿಸಬೇಕು’ ಎಂದು ಅವರು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ಈ ಕುರಿತು ಹಲವು ಸಲ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಅಲ್ಲದೇ ಈಚೆಗೆ ನಗರಕ್ಕೆ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಖುದ್ದು ಮನವಿ ಸಲ್ಲಿಸಿದ್ದೇವೆ. ಹೋರಾಟ ನಡೆಸಿದ್ದೇವೆ. ಆದರೂ ನಮ್ಮ ಬೇಡಿಕೆ ಈಡೇರಿಸಿಲ್ಲ’ ಎಂದು ದೂರಿದರು.</p>.<p>‘ಉರ್ದು ಭಾಷೆ ತನ್ನದೇ ಆದ ಸಾಂಸ್ಕೃತಿಕ, ಸಾಹಿತ್ಯಕ ಸೊಗಡು ಹೊಂದಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಎರಡನೇ ಭಾಷೆಯಾಗಿ ಜನರು ಉರ್ದು ಬಳುತ್ತಿದ್ದಾರೆ. ಹೀಗಿರುವಾಗ ಏಕೆ ಆದ್ಯತೆ ನೀಡುತ್ತಿಲ್ಲ’ ಎಂದೂ ಪ್ರಶ್ನಿಸಿದರು.</p>.<p>ಫೋರಂ ಪದಾಧಿಕಾರಿಗಳಾದ ಅಹ್ಮದ ಜಾವೀದ್, ಫೈಮುದ್ದೀನ್ ಫಿರಜಾದ, ಸೈಯದ್ ತೌಸೀಪ್ ದೇಸಾಯಿ, ಡಾ.ಮಾಜಿದ್ ಡಾಗಿ, ಡಾ.ಚಂದಹುಸೇನ ಅಕ್ಬರ್, ಸಿರಾಜ್ ತಿರಂದಾಜ್, ವಹಿದ್ ಅಂಜುಮ್, ಶಕೀಲ್ ಸರಡಗಿಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>