‘ಪರಿಶಿಷ್ಟ ಸಮುದಾಯಕ್ಕೆ ಸೇರಿದ ಯುವತಿ ಮೇಲೆ ಠಾಕೂರ್ ಸಮುದಾಯದ ನಾಲ್ವರು ದುರುಳರು ಅತ್ಯಾಚಾರ ಮಾಡಿ, ನಾಲಿಗೆ ಕತ್ತರಿಸಿ, ಮೂಳೆ ಮುರಿದು ಕೊಲೆ ಮಾಡಿದ್ದಾರೆ. ಇಂತಹ ಭೀಭತ್ಸ ಘಟನೆ ಇಡೀ ದೇಶವನ್ನೇ ನಡುಗಿಸಿದೆ. ಆದರೆ, ಉತ್ತರ ಪ್ರದೇಶದ ಸರ್ಕಾರವಾಗಲೀ, ಕೇಂದ್ರ ಸರ್ಕಾರವಾಗಲೀ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಪ್ರಕರಣವನ್ನು ಮುಚ್ಚಿ ಹಾಕುವ ಸಲುವಾಗಿ ಯುವತಿ ದೇಹವನ್ನು ತರಾತಿರಿಯಲ್ಲಿ ಸುಟ್ಟಿದ್ದಾರೆ. ಸಂತ್ರಸ್ತೆಯ ಕುಟುಂಬದವರಿಗೆ ಮಾಧ್ಯಮದ ಮುಂದೆ ಹೇಳಿಕೆ ನೀಡಲೂ ಬಿಡುತ್ತಿಲ್ಲ. ಇದೆಲ್ಲವನ್ನೂ ನೋಡಿದರೆ ಪ್ರಕರಣ ಮುಚ್ಚಿಹಾಕುವ ಹುನ್ನಾರ ನಡೆದಿದ್ದು ಸ್ಪಷ್ಟವಾಗುತ್ತದೆ’ ಎಂದೂ ದೂರಿದರು.