<p><strong>ಅಫಜಲಪುರ:</strong> ‘ಪಟ್ಟಣದ ತಹಶಿಲ್ದಾರ್ ಕಚೇರಿ ಸ್ಥಳಾಂತರಕ್ಕೆ ಮುಂದಾಗಿರುವ ಜಿಲ್ಲಾಡಳಿತದ ಕ್ರಮಕ್ಕೆ ವಿರೋಧಿಸಿ ತಾಲ್ಲೂಕಿನ ರೈತರು, ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ಜೂ.24ರಂದು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಸತ್ಯಾಗ್ರಹ ಕೈಗೊಳ್ಳಲಾಗಿದೆ’ ಎಂದು ಸಾಮಾಜಿಕ ಹೋರಾಟಗಾರ ಈರಣ್ಣ ಪಂಚಾಳ ತಿಳಿಸಿದರು.</p>.<p>ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಒಂದು ಹಂತದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ಕೂಗು ಸರ್ಕಾರಕ್ಕೆ ಮುಟ್ಟಿಸಬೇಕೆಂದು ದೃಢ ನಿರ್ಧಾರ ತೆಗೆದುಕೊಂಡು ಬೃಹತ್ ಸತ್ಯಾಗ್ರಹ ಕೈಗೊಳ್ಳಲಾಗಿದೆ. ಜನರು ತಮ್ಮ ಕೆಲಸಕ್ಕಾಗಿ 4 ಕಿ.ಮೀ ಅಲೆದಾಡುವ ಪರಿಸ್ಥಿತಿ ನಿರ್ಮಾಣ ಆಗುವುದಕ್ಕಿಂತ ಮುಂಚೆ ನಾವೆಲ್ಲರೂ ಜಾಗೃತರಾಗಬೇಕಿದೆ. ಹತ್ತಾರು ಸಮಸ್ಯೆಗಳಿಗೆ ಕಾರಣವಾಗಿರುವ ತಹಶೀಲ್ದಾರ್ ಕಚೇರಿ ಸ್ಥಳಾಂತರ ವಿರೋಧಿಸಿ ಹಮ್ಮಿಕೊಂಡಿರುವ ಸತ್ಯಾಗ್ರಹದಲ್ಲಿ ಪಕ್ಷಾತೀತ, ಜಾತ್ಯತೀತವಾಗಿ ಪಾಲ್ಗೊಳ್ಳುವ ಮೂಲಕ ಸಹಕಾರ ನೀಡಬೇಕು’ ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ:</strong> ‘ಪಟ್ಟಣದ ತಹಶಿಲ್ದಾರ್ ಕಚೇರಿ ಸ್ಥಳಾಂತರಕ್ಕೆ ಮುಂದಾಗಿರುವ ಜಿಲ್ಲಾಡಳಿತದ ಕ್ರಮಕ್ಕೆ ವಿರೋಧಿಸಿ ತಾಲ್ಲೂಕಿನ ರೈತರು, ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ಜೂ.24ರಂದು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಸತ್ಯಾಗ್ರಹ ಕೈಗೊಳ್ಳಲಾಗಿದೆ’ ಎಂದು ಸಾಮಾಜಿಕ ಹೋರಾಟಗಾರ ಈರಣ್ಣ ಪಂಚಾಳ ತಿಳಿಸಿದರು.</p>.<p>ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಒಂದು ಹಂತದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ಕೂಗು ಸರ್ಕಾರಕ್ಕೆ ಮುಟ್ಟಿಸಬೇಕೆಂದು ದೃಢ ನಿರ್ಧಾರ ತೆಗೆದುಕೊಂಡು ಬೃಹತ್ ಸತ್ಯಾಗ್ರಹ ಕೈಗೊಳ್ಳಲಾಗಿದೆ. ಜನರು ತಮ್ಮ ಕೆಲಸಕ್ಕಾಗಿ 4 ಕಿ.ಮೀ ಅಲೆದಾಡುವ ಪರಿಸ್ಥಿತಿ ನಿರ್ಮಾಣ ಆಗುವುದಕ್ಕಿಂತ ಮುಂಚೆ ನಾವೆಲ್ಲರೂ ಜಾಗೃತರಾಗಬೇಕಿದೆ. ಹತ್ತಾರು ಸಮಸ್ಯೆಗಳಿಗೆ ಕಾರಣವಾಗಿರುವ ತಹಶೀಲ್ದಾರ್ ಕಚೇರಿ ಸ್ಥಳಾಂತರ ವಿರೋಧಿಸಿ ಹಮ್ಮಿಕೊಂಡಿರುವ ಸತ್ಯಾಗ್ರಹದಲ್ಲಿ ಪಕ್ಷಾತೀತ, ಜಾತ್ಯತೀತವಾಗಿ ಪಾಲ್ಗೊಳ್ಳುವ ಮೂಲಕ ಸಹಕಾರ ನೀಡಬೇಕು’ ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>