ಕಲಬುರ್ಗಿ: ‘ಶಾಸಕ ಗೂಳಿಹಟ್ಟಿ ಶೇಖರ್ ಅವರು ವಿಧಾನಸಭೆ ಅಧಿವೇಶನದಲ್ಲಿಯೇ ಕ್ರೈಸ್ತ ಸಮುದಾಯದ ವಿರುದ್ಧ ಇಲ್ಲಸಲ್ಲದ ಮಾತುಗಳನ್ನಾಡಿದ ಕ್ರಮ ಖಂಡಿಸಿ, ಬೀದರ್ನಲ್ಲಿ ಸೆ. 28ರಂದು ಬೀದರ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಇದರಲ್ಲಿ ಜಿಲ್ಲೆಯ ಸಮುದಾಯದವರೂ ಪಾಲ್ಗೊಳ್ಳಬೇಕು’ ಎಂದು ಅಖಿಲ ಭಾರತ ಕ್ರೈಸ್ತ ಮಹಾಸಭಾದ ಕಲ್ಯಾಣ ಕರ್ನಾಟಕ ವಿಭಾಗದ ಅಧ್ಯಕ್ಷ ಜ್ಞಾನಮಿತ್ರ ಸಾಮುಯೆಲ್ ತಿಳಿಸಿದ್ದಾರೆ.