ಜನವಾದಿ ಮಹಿಳಾ ಸಂಘಟನೆ ಅಧ್ಯಕ್ಷೆ ಮೀನಾಕ್ಷಿ ಬಾಳಿ ಮಾತನಾಡಿ, ‘ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವ ಹುದ್ದೆಗಳು ಯಾವುದೇ ಒಂದು ಅಜೆಂಡಾ ಜಾರಿಗಾಗಿ ಇರುವ ಹುದ್ದೆಗಳಲ್ಲ. ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರೇ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ಪೊಲೀಸರು ಕ್ಯಾಂಪಸ್ ಒಳಗೆ ಬರಲು ಬಿಡಬಾರದು. ಆದರೆ, ಕುಲಸಚಿವರೇ ಪೊಲೀಸರನ್ನು ಕರೆಯಿಸಿ ವಿದ್ಯಾರ್ಥಿಗಳ ಮೇಲೆ ಭಯ ಉಂಟು ಮಾಡುತ್ತಿರುವುದು ವಿಪರ್ಯಾಸ’ ಎಂದರು. ವಿವಿಧ ಸಂಘಟನೆಗಳ ಮುಖಂಡರಾದ ಕೆ.ನೀಲಾ, ಅಶ್ವಿನಿ ಮದನಕರ್, ಮರೆಪ್ಪ ಹಳ್ಳಿ, ಅನಿಲ್ ಮಂಗಾ, ಅಧ್ಯಕ್ಷ ಮಂಡಳಿ ಸದಸ್ಯ ಸೂರ್ಯಕಾಂತ ನಿಂಬಾಳ್ಕರ್, ಸಮಿತಿಯ ಸಂಚಾಲಕರಾದ ಅರ್ಜುನ ಭದ್ರೆ, ಪ್ರಭು ಖಾನಾಪುರೆ, ಡಾ.ಅನಿಲ್ ಟೆಂಗಳಿ, ಸಂತೋಷ ಮೇಲ್ಮಿನಿ, ಸುನೀಲ್ ಮಾನಪಡೆ, ಎಂ.ಬಿ.ಸಜ್ಜನ್, ಹಣಮಂತ ಇಟಗಿ, ದತ್ತಾತ್ರೇಯ ಇಕ್ಕಳಕಿ, ದತ್ತಾತ್ರೇಯ ಕುಡುಕಿ, ಶ್ರೀಮಂತ ಬಿರಾದಾರ, ಕೋದಂಡ ರಾಮ ಇದ್ದರು.