<p><strong>ಕಲಬುರಗಿ:</strong> ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನಲ್ಲಿ ಯುವತಿಯೊಬ್ಬಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಕ್ರಾಂತಿವೀರ ಬೆಳವಡಿ ವಡ್ಡರ ಯಲ್ಲಣ್ಣ ಸೇನೆ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಆರೋಪಿ ಅಲ್ತಾಫ್ ಮತ್ತು ಆತನ ಸ್ನೇಹಿತರು ಯುವತಿಯನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದು ಖಂಡನೀಯ. ಅತ್ಯಾಚಾರ ಮಾಡಿದ ದುಷ್ಕರ್ಮಿಗಳನ್ನು ಗಲ್ಲಿಗೆ ಹಾಕಬೇಕು. ಇಲ್ಲವೆ ಎನ್ಕೌಂಟರ್ ಮಾಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದ್ದಾರೆ.</p>.<p>ಅತ್ಯಾಚಾರ ಪ್ರಕರಣಗಳಲ್ಲಿ ಭಾಗಿಯಾದವರಿಗೆ ರಾಜ್ಯ ಸರ್ಕಾರ ಕಠಿಣ ಶಿಕ್ಷೆ ವಿಧಿಸಿ ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಂಡಾಗ ಸಂತ್ರಸ್ತೆ ಹಾಗೂ ಆಕೆಯ ಕುಟುಂಬಕ್ಕೆ ನ್ಯಾಯ ಸಿಕ್ಕಂತೆ ಆಗುತ್ತದೆ. ಇಲ್ಲದೆ ಇದ್ದರೆ ರಾಜ್ಯದ ಮೂಲೆ ಮೂಲೆಯಲ್ಲಿ ಇಂತಹ ದುಷ್ಕರ್ಮಿಗಳು ತಲೆ ಎತ್ತುತ್ತಾರೆ ಎಂದಿದ್ದಾರೆ.</p>.<p>ಪ್ರತಿಭಟನೆಯಲ್ಲಿ ಸೇನೆ ಅಧ್ಯಕ್ಷ ಜಿ.ಶಿವಶಂಕರ, ಪ್ರಮುಖರಾದ ಗುಂಡಪ್ಪ ಸಾಳೋಂಕೆ, ಸಂಜೀವಕುಮಾರ ಮಂಜಳಕರ್, ತಿಪ್ಪಣ್ಣ ಒಡೆಯರಾಜ, ಸಿದ್ರಾಮ ದಂಡಗೂಲಕರ್, ನಾಗೇಶ ಕುಶಳಕರ, ರಾಘು ಲಸಕರೆ, ಸುರೇಶ ಕುಶಳಕರ, ಭೀಮಾಶಂಕರ ಭಂಕೂರ, ಶ್ರೀಹರಿ ಜಾಧವ ಪಾಲ್ಗೊಂಡಿದ್ದರು.</p>.<p>ದಿಟ್ಟ ಕ್ರಮ ತೆಗೆದುಕೊಳ್ಳಿ: ಕಾರ್ಕಳದ ಯುವತಿ ಮೇಲಿನ ಅತ್ಯಾಚಾರ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡು, ಆರೋಪಿಗಳ ಮೇಲೆ ದಿಟ್ಟ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಭೋವಿ ವಡ್ಡರ್ ಸಮಾಜ ಜಿಲ್ಲಾಧ್ಯಕ್ಷ ಗುಂಡಪ್ಪ ಎಚ್.ಸಾಳಂಕೆ ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಯುವತಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದವರ ಮೇಲೆ ನಡು ರಸ್ತೆಯಲ್ಲಿ ಗುಂಡು ಹಾರಿಸಬೇಕು. ಇಂತಹ ಕೃತ್ಯಗಳಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಆಗಿದೆ. ಉಡುಪಿಯ ಜಿಲ್ಲಾಧಿಕಾರಿಗಳು ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ಭದ್ರತೆ ಕಲ್ಪಿಸಬೇಕು’ ಎಂದು ಮನವಿ ಮಾಡಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ವಿಠಲ ನೆಲೋಗಿ, ರಾಜು ಮೇಸ್ತ್ರಿ, ರಾಮಯ್ಯ ಪೂಜಾರಿ ಸೇರಿ ಹಲವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನಲ್ಲಿ ಯುವತಿಯೊಬ್ಬಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಕ್ರಾಂತಿವೀರ ಬೆಳವಡಿ ವಡ್ಡರ ಯಲ್ಲಣ್ಣ ಸೇನೆ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಆರೋಪಿ ಅಲ್ತಾಫ್ ಮತ್ತು ಆತನ ಸ್ನೇಹಿತರು ಯುವತಿಯನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದು ಖಂಡನೀಯ. ಅತ್ಯಾಚಾರ ಮಾಡಿದ ದುಷ್ಕರ್ಮಿಗಳನ್ನು ಗಲ್ಲಿಗೆ ಹಾಕಬೇಕು. ಇಲ್ಲವೆ ಎನ್ಕೌಂಟರ್ ಮಾಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದ್ದಾರೆ.</p>.<p>ಅತ್ಯಾಚಾರ ಪ್ರಕರಣಗಳಲ್ಲಿ ಭಾಗಿಯಾದವರಿಗೆ ರಾಜ್ಯ ಸರ್ಕಾರ ಕಠಿಣ ಶಿಕ್ಷೆ ವಿಧಿಸಿ ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಂಡಾಗ ಸಂತ್ರಸ್ತೆ ಹಾಗೂ ಆಕೆಯ ಕುಟುಂಬಕ್ಕೆ ನ್ಯಾಯ ಸಿಕ್ಕಂತೆ ಆಗುತ್ತದೆ. ಇಲ್ಲದೆ ಇದ್ದರೆ ರಾಜ್ಯದ ಮೂಲೆ ಮೂಲೆಯಲ್ಲಿ ಇಂತಹ ದುಷ್ಕರ್ಮಿಗಳು ತಲೆ ಎತ್ತುತ್ತಾರೆ ಎಂದಿದ್ದಾರೆ.</p>.<p>ಪ್ರತಿಭಟನೆಯಲ್ಲಿ ಸೇನೆ ಅಧ್ಯಕ್ಷ ಜಿ.ಶಿವಶಂಕರ, ಪ್ರಮುಖರಾದ ಗುಂಡಪ್ಪ ಸಾಳೋಂಕೆ, ಸಂಜೀವಕುಮಾರ ಮಂಜಳಕರ್, ತಿಪ್ಪಣ್ಣ ಒಡೆಯರಾಜ, ಸಿದ್ರಾಮ ದಂಡಗೂಲಕರ್, ನಾಗೇಶ ಕುಶಳಕರ, ರಾಘು ಲಸಕರೆ, ಸುರೇಶ ಕುಶಳಕರ, ಭೀಮಾಶಂಕರ ಭಂಕೂರ, ಶ್ರೀಹರಿ ಜಾಧವ ಪಾಲ್ಗೊಂಡಿದ್ದರು.</p>.<p>ದಿಟ್ಟ ಕ್ರಮ ತೆಗೆದುಕೊಳ್ಳಿ: ಕಾರ್ಕಳದ ಯುವತಿ ಮೇಲಿನ ಅತ್ಯಾಚಾರ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡು, ಆರೋಪಿಗಳ ಮೇಲೆ ದಿಟ್ಟ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಭೋವಿ ವಡ್ಡರ್ ಸಮಾಜ ಜಿಲ್ಲಾಧ್ಯಕ್ಷ ಗುಂಡಪ್ಪ ಎಚ್.ಸಾಳಂಕೆ ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಯುವತಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದವರ ಮೇಲೆ ನಡು ರಸ್ತೆಯಲ್ಲಿ ಗುಂಡು ಹಾರಿಸಬೇಕು. ಇಂತಹ ಕೃತ್ಯಗಳಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಆಗಿದೆ. ಉಡುಪಿಯ ಜಿಲ್ಲಾಧಿಕಾರಿಗಳು ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ಭದ್ರತೆ ಕಲ್ಪಿಸಬೇಕು’ ಎಂದು ಮನವಿ ಮಾಡಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ವಿಠಲ ನೆಲೋಗಿ, ರಾಜು ಮೇಸ್ತ್ರಿ, ರಾಮಯ್ಯ ಪೂಜಾರಿ ಸೇರಿ ಹಲವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>